65 ಪ್ರಕರಣಗಳಲ್ಲಿ114 ಆರೋಪಿಗಳ ಬಂಧನ: 83,43,657 ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್

ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.

ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.

2024 ರ ಡಿಸೆಂಬರ್ 12 ರಂದು ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ತಾಜ್ ನಗರದಲ್ಲಿ ಮಹ್ಮದ್ ಅಬ್ದುಲ್ ನಬೀ ಎಂಬುವರು ಕುಟುಂಬ ಸಮೇತ ಹಜ್ ಯಾತ್ರೆಗೆ ತೆರಳಿದ್ದರು. ಈ ವೇಳೆ ಸಂಬಂಧಿ ವಾಸಿಮ್ ಎಂಬಾತನಿಗೆ ಮನೆ ಬೀಗ ಕೊಟ್ಟು ಮನೆ ನೋಡಿಕೊಳ್ಳಲು ಹೇಳಿದ್ದರು. ಈ ವೇಳೆ ವಾಸಿಮ್ ತನ್ನ ಸ್ನೇಹಿತನಾದ ಶಾದಾಬ್ ಎಂಬಾತನ ಜೊತೆಗೂಡಿ ಮಹ್ಮದ್ ಅಬ್ದುಲ್ ನಬೀ ಮನೆ ಸ್ವಚ್ಛ ಮಾಡುವ ನೆಪದಲ್ಲಿ ಮನೆಯಲ್ಲಿನ ನಗದು ಹಣ ಮತ್ತು ಚಿನ್ನಾಭರಣಗಳನ್ನ ದೋಚಿದ್ದರು.
ಮಾರನೇ ದಿನೇ ಹಜ್ ಯಾತ್ರೆ ಮುಗಿಸಿಕೊಂಡು ಮನೆಗೆ ಬಂದಾಗ ಕಳ್ಳತನವಾಗಿರೋದನ್ನ ಕಂಡು ಅಬ್ದುಲ್ ನಬೀ ಚೌಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ವಾಸಿಮ್ ಮತ್ತು ಶಾದಾಬ್ ಇಬ್ಬರು ಸೇರಿಕೊಂಡು ಮನೆಗಳ್ಳತನ ಪ್ರಕರಣ ಭೇದಿಸಲು ಯಾಕೆ ವಿಳಂಬ ಮಾಡ್ತಿದ್ದಿರಿ, ಬೇಗ ಆರೋಪಿಗಳನ್ನ ಬಂಧಿಸಿ ರಿಕವರಿ ಮಾಡಿ ಅಂತಾ ಪದೇ ಪದೇ ಒತ್ತಡ ಹಾಕಿದ್ದಾರೆ. ಈ ವೇಳೆ ಅನುಮಾನಗೊಂಡ ಚೌಕ್ ಇನ್ಸ್ಪೆಕ್ಟರ್ ರಾಘವೇಂದ್ರ, ವಾಸಿಮ್ ಮತ್ತು ಶಾದಾಬ್‌ರನ್ನ ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಅಬ್ದುಲ್ ನಬೀ ಮನೆಗಳ್ಳತನ ಮಾಡಿರೋದಾಗಿ ಒಪ್ಪಿಕೊಂಡಿದ್ದಾರೆ.

ಮನೆಗಳ್ಳತನ ಸೇರಿದಂತೆ ಇತರೆ 65 ಪ್ರಕರಣಗಳಲ್ಲಿ 114 ಆರೋಪಿಗಳನ್ನು ಬಂಧಿಸಿ ಸದರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಒಟ್ಟು 936 ಗ್ರಾಂ ಬಂಗಾರ, 1908 ಗ್ರಾಂ ಬೆಳ್ಳಿ, ನಗದು ಹಣ ರೂ ₹ 3,39,650/-  ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ₹ 25,54,500 ಸೇರಿದಂತೆ ಒಟ್ಟು ₹ 83,43,657/- ಮೌಲ್ಯದ ಸ್ವತ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

19 hours ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

2 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

2 days ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

2 days ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

3 days ago