65 ಪ್ರಕರಣಗಳಲ್ಲಿ114 ಆರೋಪಿಗಳ ಬಂಧನ: 83,43,657 ಮೌಲ್ಯದ ಸ್ವತ್ತು ವಾರಸುದಾರರಿಗೆ ವಾಪಸ್

ತಮ್ಮದೇ ಏರಿಯಾದ ಮನೆಯೊಂದಕ್ಕೆ ಕನ್ನ ಹಾಕಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನ ಖತರ್ನಾಕ್ ಖದೀಮರು ಕಳ್ಳತನ ಮಾಡಿದ್ದಾರೆ.

ಮನೆಗಳ್ಳತನ ಆಗಿದ್ದಕ್ಕೆ ಮಾಲೀಕರು ಪೊಲೀಸರಿಗೆ ದೂರನ್ನ ಸಹ ನೀಡಿದ್ದರು, ಈ ವೇಳೆ ಅದೇ ಏರಿಯಾದ ಇಬ್ಬರು ಯುವಕರು ಪ್ರಕರಣ ಯಾಕೆ ಬೇಧಿಸಿಲ್ಲ ಅಂತಾ ಪದೇ ಪದೇ ಪೊಲೀಸರ ಮೇಲೆ ಒತ್ತಡ ಹಾಕೋಕೆ ಶುರು ಮಾಡಿದ್ದಾರೆ. ಈ ವೇಳೆ ಅನುಮಾನಗೊಂಡ ಪೊಲೀಸರು ಇಬ್ಬರನ್ನ ವಿಚಾರಣೆಗೆ ಒಳಪಡಿಸಿದ್ದಾರೆ, ಆವಾಗ ಪ್ರಕರಣದ ಅಸಲಿಯತ್ ಬೆಳಕಿಗೆ ಬಂದಿದೆ.

2024 ರ ಡಿಸೆಂಬರ್ 12 ರಂದು ಕಲಬುರಗಿ ನಗರದ ಚೌಕ್ ಪೊಲೀಸ್ ಠಾಣಾ ವ್ಯಾಪ್ತಿಯ ತಾಜ್ ನಗರದಲ್ಲಿ ಮಹ್ಮದ್ ಅಬ್ದುಲ್ ನಬೀ ಎಂಬುವರು ಕುಟುಂಬ ಸಮೇತ ಹಜ್ ಯಾತ್ರೆಗೆ ತೆರಳಿದ್ದರು. ಈ ವೇಳೆ ಸಂಬಂಧಿ ವಾಸಿಮ್ ಎಂಬಾತನಿಗೆ ಮನೆ ಬೀಗ ಕೊಟ್ಟು ಮನೆ ನೋಡಿಕೊಳ್ಳಲು ಹೇಳಿದ್ದರು. ಈ ವೇಳೆ ವಾಸಿಮ್ ತನ್ನ ಸ್ನೇಹಿತನಾದ ಶಾದಾಬ್ ಎಂಬಾತನ ಜೊತೆಗೂಡಿ ಮಹ್ಮದ್ ಅಬ್ದುಲ್ ನಬೀ ಮನೆ ಸ್ವಚ್ಛ ಮಾಡುವ ನೆಪದಲ್ಲಿ ಮನೆಯಲ್ಲಿನ ನಗದು ಹಣ ಮತ್ತು ಚಿನ್ನಾಭರಣಗಳನ್ನ ದೋಚಿದ್ದರು.
ಮಾರನೇ ದಿನೇ ಹಜ್ ಯಾತ್ರೆ ಮುಗಿಸಿಕೊಂಡು ಮನೆಗೆ ಬಂದಾಗ ಕಳ್ಳತನವಾಗಿರೋದನ್ನ ಕಂಡು ಅಬ್ದುಲ್ ನಬೀ ಚೌಕ್ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಬಳಿಕ ವಾಸಿಮ್ ಮತ್ತು ಶಾದಾಬ್ ಇಬ್ಬರು ಸೇರಿಕೊಂಡು ಮನೆಗಳ್ಳತನ ಪ್ರಕರಣ ಭೇದಿಸಲು ಯಾಕೆ ವಿಳಂಬ ಮಾಡ್ತಿದ್ದಿರಿ, ಬೇಗ ಆರೋಪಿಗಳನ್ನ ಬಂಧಿಸಿ ರಿಕವರಿ ಮಾಡಿ ಅಂತಾ ಪದೇ ಪದೇ ಒತ್ತಡ ಹಾಕಿದ್ದಾರೆ. ಈ ವೇಳೆ ಅನುಮಾನಗೊಂಡ ಚೌಕ್ ಇನ್ಸ್ಪೆಕ್ಟರ್ ರಾಘವೇಂದ್ರ, ವಾಸಿಮ್ ಮತ್ತು ಶಾದಾಬ್‌ರನ್ನ ತೀವ್ರ ವಿಚಾರಣೆಗೆ ಒಳಪಡಿಸಿದಾಗ ತಾವೇ ಅಬ್ದುಲ್ ನಬೀ ಮನೆಗಳ್ಳತನ ಮಾಡಿರೋದಾಗಿ ಒಪ್ಪಿಕೊಂಡಿದ್ದಾರೆ.

ಮನೆಗಳ್ಳತನ ಸೇರಿದಂತೆ ಇತರೆ 65 ಪ್ರಕರಣಗಳಲ್ಲಿ 114 ಆರೋಪಿಗಳನ್ನು ಬಂಧಿಸಿ ಸದರಿ ಪ್ರಕರಣಗಳಲ್ಲಿ ವಶಪಡಿಸಿಕೊಂಡ ಒಟ್ಟು 936 ಗ್ರಾಂ ಬಂಗಾರ, 1908 ಗ್ರಾಂ ಬೆಳ್ಳಿ, ನಗದು ಹಣ ರೂ ₹ 3,39,650/-  ಹಾಗೂ ಇತರೆ ಬೆಲೆ ಬಾಳುವ ವಸ್ತುಗಳು ₹ 25,54,500 ಸೇರಿದಂತೆ ಒಟ್ಟು ₹ 83,43,657/- ಮೌಲ್ಯದ ಸ್ವತ್ತುಗಳನ್ನು ವಾರಸುದಾರರಿಗೆ ಹಿಂದಿರುಗಿಸಲಾಯಿತು.

ಈ ಸಂದರ್ಭದಲ್ಲಿ ಪ್ರಕರಣಗಳನ್ನು ಭೇದಿಸುವಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಪೊಲೀಸ್ ಆಯುಕ್ತರಾದ ಡಾ|| ಶರಣಪ್ಪ ಎಸ್ ಡಿ ಅವರು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದ್ದಾರೆ.

Ramesh Babu

Journalist

Recent Posts

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

8 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

13 hours ago

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

1 day ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

2 days ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

2 days ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

2 days ago