7 ವರ್ಷದ ಬಾಲಕನಿಗೆ ಹಾವು ಕಡಿತ ಪ್ರಕರಣ: ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆ: ಪ್ರಾಣಾಪಾಯದಿಂದ ಪಾರಾಗಿ ಬದುಕುಳಿದ ಬಾಲಕ: ವೈದ್ಯರಿಗೆ ಧನ್ಯವಾದ ಸಲ್ಲಿಕೆ

ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…

ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.

ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.

ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್‌ಗೆ (7 ವರ್ಷ) ನಾಗರಹಾವು ಕಚ್ಚಿತ್ತು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.

ಈ ವೇಳೆ ಆಕಾಶ್‌ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.

ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾ‌ರ್ ಜೀವಾಪಾಯದಿಂದ ಪಾರಾಗಿದ್ದಾನೆ.

Ramesh Babu

Journalist

Recent Posts

ಮೂಡಬಿದ್ರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿಜಿ ಕಾಮಕಾಂಡ ಬಯಲು: ದೂರು ನೀಡಲು ಬಂದ ಮಹಿಳೆಯನ್ನೇ ಲೈಂಗಿಕವಾಗಿ ಬಳಸಿಕೊಳ್ಳಲು ಸಂಚು: ಸಂತ್ರಸ್ತೆಯ ಅಪ್ರಾಪ್ತ ಮಗಳಿಗೂ ಇನ್ಸ್‌ಪೆಕ್ಟರ್ ಬೆದರಿಕೆ ಆರೋಪ

ಕಾನೂನು ರಕ್ಷಕನೇ ಭಕ್ಷಕನಾದರೆ ಸಾಮಾನ್ಯ ಜನರ ಗತಿ ಏನು? ದೂರು ನೀಡಲು ಬಂದವರನ್ನೇ ಲೈಂಗಿಕವಾಗಿ ಬಳಸಿಕೊಳ್ಳುವ ಕಾಮುಕ ಪೊಲೀಸ್ ಅಧಿಕಾರಿಯೊಬ್ಬನ…

14 minutes ago

ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ: ಮುಗಿಲು ಮುಟ್ಟಿದ ಕುಟುಂಬಸ್ಥರ ಅಳಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅಲಸಹಳ್ಳಿ ಗೇಟ್ ಸಮೀಪದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನೊಬ್ಬನ ಶವ…

31 minutes ago

ನೈತಿಕತೆ, ಸಾಹಿತ್ಯ ಮತ್ತು ಜ್ಞಾನಪೀಠ ಪ್ರಶಸ್ತಿ…

ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…

2 hours ago

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

13 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

17 hours ago