Oplus_0
ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…
ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.
ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.
ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ಭಾರತ ಸಾಹಿತ್ಯದ ನೊಬೆಲ್ ಎಂದೇ ಹೆಸರಾದ ಜ್ಞಾನಪೀಠ ಪ್ರಶಸ್ತಿ ಸಾಹಿತ್ಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿ ಮಾತ್ರವಲ್ಲ, ಅದನ್ನು ಪಡೆದ ವ್ಯಕ್ತಿಗಳು…
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…