Oplus_0
ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…
ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.
ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.
ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…