Oplus_0
ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…
ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.
ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.
ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…