Oplus_0
ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…
ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.
ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.
ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…