Oplus_0
ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…
ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.
ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.
ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್ಗೆ (7 ವರ್ಷ) ನಾಗರಹಾವು ಕಚ್ಚಿತ್ತು.
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.
ಈ ವೇಳೆ ಆಕಾಶ್ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.
ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾರ್ ಜೀವಾಪಾಯದಿಂದ ಪಾರಾಗಿದ್ದಾನೆ.
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…
21 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಮದ್ಯ ಮಾರಾಟ ಮಾಡುವುದು ಅಥವಾ ಮದ್ಯಪಾನ ಮಾಡಲು ಅನುಮತಿ ನೀಡುವುದು ಕಾನೂನುಬಾಹಿರವಾಗಿದ್ದು, ತಪ್ಪಿದ್ದಲ್ಲಿ, ಪರವಾನಗಿ…