7 ವರ್ಷದ ಬಾಲಕನಿಗೆ ಹಾವು ಕಡಿತ ಪ್ರಕರಣ: ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆ: ಪ್ರಾಣಾಪಾಯದಿಂದ ಪಾರಾಗಿ ಬದುಕುಳಿದ ಬಾಲಕ: ವೈದ್ಯರಿಗೆ ಧನ್ಯವಾದ ಸಲ್ಲಿಕೆ

ದೊಡ್ಡಬಳ್ಳಾಪುರ: ನಾಗರಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿದ್ದ 7 ವರ್ಷದ ಬಾಲಕ, ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಸಮಯ ಪ್ರಜ್ಞೆಯಿಂದ ಸಾವನ್ನೇ ಗೆದ್ದು ಬದುಕುಳಿದು ಬಂದಿದ್ದಾನೆ. ಅದಕ್ಕೆ ವೈದ್ಯೋ ನಾರಾಯಣ ಹರಿ ಎಂದು ಕರೆಯುವುದು…

ಈ ಹಿನ್ನೆಲೆ ವಿಕ್ಟೋರಿಯಾ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆದ ಬಾಲಕ ಇಂದು ಪೋಷಕರೊಂದಿಗೆ ನಗರದ ಸರ್ಕಾರಿ ಆಸ್ಪತ್ರೆಗೆ ಬಂದು ತ್ವರಿತವಾಗಿ ಚಿಕಿತ್ಸೆ ನೀಡಿ, ಜೀವ ಉಳಿಸಿದ ವೈದ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾನೆ.

ಬಾಲಕ ಹಾಗೂ ಪೋಷಕರ ಧನ್ಯವಾದಕದಕೆ ವೈದ್ಯಕೀಯ ಸಿಬ್ಬಂದಿಯ ಮೊಗದಲ್ಲಿ ಸಾರ್ಥಕತೆ ಕಂಡುಬಂತು.

ಇದೇ ಆ.23 ರಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಹಳ್ಳಿ ಬಳಿ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕ ಕುಟುಂಬದೊಂದಿಗೆ ಕೆಲಸಕ್ಕೆ ತೆರಳಿದ್ದ ವೇಳೆ ಅಮೀದ್ ಕುಮಾರ್‌ಗೆ (7 ವರ್ಷ) ನಾಗರಹಾವು ಕಚ್ಚಿತ್ತು.

ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ಕೂಡಲೇ ನಗರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಆಸ್ಪತ್ರೆಯ ವೈದ್ಯರಾದ ಡಾ.ರಾಜು, ಡಾ.ವಿಜಯ ಅವರು ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಬಾಲಕ ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭಿಸಿದನು, ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಹಿತ್ತು.

ಈ ವೇಳೆ ಆಕಾಶ್‌ ಆಸ್ಪತ್ರೆ ವೈದ್ಯರಾದ ಡಾ.ಮನೋಜ್, ಡಾ.ನಿತೀಶ್ ಮಗುವಿಗೆ ಚಿಕಿತ್ಸೆ ನೀಡುತ್ತಾ ಆಂಬ್ಯುಲೆನ್ಸ್ ನಲ್ಲಿ ಬಾಲಕನ ಜೊತೆ ತೆರಳಿ, ವಿಕ್ಟೋರಿಯಾ ಆಸ್ಪತ್ರೆಯ ಮಕ್ಕಳ ತುರ್ತು ಘಟಕದಲ್ಲಿ ದಾಖಲಿಸಿದ್ದರು.

ವೈದ್ಯರ ಸಮಯ ಪ್ರಜ್ಞೆ, ಪೋಷಕರು ಹಾಗೂ ಜನರ ಹಾರೈಕೆಯಿಂದ ಅದೃಷ್ಟವಶಾತ್ ಬಾಲಕ ಅಮೀದ್ ಕುಮಾ‌ರ್ ಜೀವಾಪಾಯದಿಂದ ಪಾರಾಗಿದ್ದಾನೆ.

Ramesh Babu

Journalist

Recent Posts

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

5 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

5 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

5 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

5 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

6 hours ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

8 hours ago