7 ವರ್ಷದ ಮಗುವಿಗೆ ಕಚ್ಚಿದ ನಾಗರ ಹಾವು: ಮಗುವಿನ ಸ್ಥಿತಿ ಗಂಭೀರ

ಸುಮಾರು 7 ವರ್ಷದ ಮಗುವಿಗೆ ನಾಗರ ಹಾವು ಕಚ್ಚಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ‌ ಕೋಡಿಹಳ್ಳಿ ಬಳಿ‌ ಇಂದು ಮಧ್ಯಾಹ್ನ ನಡೆದಿದೆ.

ಕೋಡಿಹಳ್ಳಿ ಸಮೀಪ ಕೂಲಿ ಕೆಲಸಕ್ಕಾಗಿ ಬಂದಿದ್ದ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕರ ಕುಟುಂಬದ ಅಮೀದ್ ಕುಮಾರ್ ಎಂಬ ಏಳು ವರ್ಷದ ಮಗುವಿಗೆ ನಾಗರ ಹಾವು ಕಚ್ಚಿದೆ.

ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಗುವನ್ನು ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಗೆ ಕರೆತರಲಾಗಿತ್ತು. ಮಗುವಿನ ಪರಿಸ್ಥಿತಿ ಬಹಳ ಗಂಭೀರವಾಗಿದ್ದರಿಂದ ಉಸಿರಾಟ ಬಹುತೇಕ ನಿಂತು ಹೋಗಿತ್ತು.

ಡಾ ರಾಜು, ಡಾ ವಿಜಯ ರವರ ತುರ್ತು ಚಿಕಿತ್ಸೆಯ ಸತತ ಪ್ರಯತ್ನದ ಫಲವಾಗಿ ಮಗು ಸ್ವಲ್ಪ ಮಟ್ಟಿಗೆ ಉಸಿರಾಟ ಪ್ರಾರಂಭವಾಯಿತು. ಈ ಸಂದರ್ಭದಲ್ಲಿ ದೀಪು, ರಂಜಿತ, ಭವ್ಯ ನರ್ಸ್ ಗಳು, ಸಿಬ್ಬಂದಿ ವಿಜಯ್ ಸಹಾಯ ಮಾಡಿದರು.

ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಸಾರ್ವಜನಿಕ ಆಸ್ಪತ್ರೆಯ ಆಂಬ್ಯುಲೆನ್ಸ್ ನಲ್ಲಿ ಚಾಲಕ ಮಧು ಅವರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಸದ್ಯ ಮಕ್ಕಳ ತುರ್ತು ನಿಗಾ ಘಟಕದಲ್ಲಿ ದಾಖಲಿಸಲಾಗಿರುತ್ತದೆ.

ಸದ್ಯ ಮಗುವಿನ ಆರೋಗ್ಯ ಸ್ಥಿತಿ ಈಗಲೂ ಗಂಭೀರವಾಗಿದ್ದು, ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುತ್ತದೆ. ಸಾವು ಬದುಕಿನ ನಡುವೆ ಹೋರಾಡುತ್ತಿರುವ ಪುಟ್ಟ ಬಾಲಕ ಗುಣಮುಖಲಾಗಲೆಂದು ಹಾರೈಸಲಾಗಿದೆ.

Ramesh Babu

Journalist

Recent Posts

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

1 hour ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

6 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

18 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

19 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

19 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

19 hours ago