70 ವರ್ಷಗಳಿಂದ ಇದ್ದ ಪೊಲೀಸ್ ಕ್ಯಾಪ್ ಬದಲಾವಣೆ: ಪೊಲೀಸ್ ಸಿಬ್ಬಂದಿಗೆ ನೂತನ ಪೀಕ್ ಕ್ಯಾಪ್ ವಿತರಣೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ, ಇದು ಪೊಲೀಸ್ ಇಲಾಖೆಯ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ. ನಮ್ಮ ಯುವ ಶಕ್ತಿ, ಯುವಜನರ ಚೈತನ್ಯ ಮತ್ತು ಸಾಮರ್ಥ್ಯಗಳು ಮಾದಕ ವಸ್ತುಗಳಿಂದ ಬಲಿ ಆಗಬಾರದು. ಇದಕ್ಕೆ ಪೊಲೀಸ್ ಇಲಾಖೆ ಕಟಿಬದ್ಧ ನಿಲುವು ತಳೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಪ್ ವಿತರಣೆ, ಮಾದಕ ದ್ರವ್ಯ ವಿರೋಧಿ ಕಾರ್ಯಪಡೆ ಉದ್ಘಾಟನೆ ಹಾಗೂ ಸನ್ಮಿತ್ರ ಕಾರ್ಯಯೋಜನೆ ಕೈಪಿಡಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಘರ್ಷಣೆ, ಅನೈತಿಕ ಪೊಲೀಸ್ ಗಿರಿ ಹೆಚ್ಚಾಗಿತ್ತು. ಹಿಂದಿದ್ದ ಅಧಿಕಾರಿಗಳು ನಿಯಂತ್ರಣ ಮಾಡಲಿಲ್ಲ. ಇಬ್ಬರು ಅಧಿಕಾರಿಗಳನ್ನು ಬದಲಾಯಿಸಿ ಆದೇಶ ಹೊರಡಿಸಿದೆ. ಈಗ ದಕ್ಷಿಣ ಕನ್ನಡ ಜಿಲ್ಲೆ ನಿಯಂತ್ರಣದಲ್ಲಿದೆ. ಈ ಸಾಧನೆ ಮಾಡಿದ್ದೂ ನಮ್ಮದೇ ಅಧಿಕಾರಿಗಳು ಮತ್ತು ಸಿಬ್ಬಂದಿ. ಇವರೇನು ಬೇರೆ ಗ್ರಹದಿಂದ ಬಂದವರಲ್ಲ. ನಿಮ್ಮವರೇ, ನಮ್ಮವರೇ ಆಗಿದ್ದಾರೆ. ಆದ್ದರಿಂದ ನೀವು ಮನಸ್ಸು ಮಾಡಿದರೆ ಎಲ್ಲವೂ ಸಾಧ್ಯವಿದೆ. ಸಾಧಿಸುವ ಛಲ ಬೇಕಷ್ಟೆ ಎಂದರು.

ಇದೇ ರೀತಿ ಇಡೀ ರಾಜ್ಯದಲ್ಲಿ ಮಾದಕ ವಸ್ತು ಹಾವಳಿ ತಪ್ಪಿಸಲು ನಿಮ್ಮಿಂದ ಸಾಧ್ಯವಿದೆ. ನೀವು ಮನಸ್ಸು ಮಾಡಿದರೆ ಕರ್ನಾಟಕ ಪೊಲೀಸರ ಘನತೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಾಗುತ್ತದೆ ಎಂದು ಹೇಳಿದರು.

ಕೆಲವು ಪೊಲೀಸರು ರಿಯಲ್ ಎಸ್ಟೇಟ್ ಮಾಡುವವರ ಜೊತೆ, ಡ್ರಗ್ ಜಾಲದ ಜೊತೆ ಶಾಮೀಲಾಗಿರ್ತಾರೆ. ರೌಡಿಗಳನ್ನು ಮೊಳಕೆಯಲ್ಲೆ ಚಿವುಟಿ ಹಾಕುವುದು ಪೊಲೀಸರಿಂದ ಸಾಧ್ಯವಿದೆ. ಪೊಲೀಸರ ಬಗ್ಗೆ ಅಪರಾಧ ಜಗತ್ತಿಗೆ ಭಯ ಕಡಿಮೆಯಾಗಿದೆ. ಯಾಕೆ ಹೀಗಾಯ್ತು ಎಂದು ಆತ್ಮಸಾಕ್ಷಿಯನ್ನು ಕೇಳಿಕೊಳ್ಳಬೇಕು ಎಂದು ತಿಳಿಸಿದರು.

ಡ್ರಗ್ ಮಾರುವವರು, ತರುವವರು, ಎಲ್ಲಿಂದ ಡ್ರಗ್ಸ್ ಬರುತ್ತದೆ, ಈ ಜಾಲದ ಏಜೆಂಟರು ಯಾರ್ಯಾರು ಎನ್ನುವುದೂ ಪೊಲೀಸರಿಗೆ ಗೊತ್ತಿರುತ್ತದೆ. ಆದಷ್ಟು ಬೇಗ ರಾಜ್ಯ, “ಡ್ರಗ್ ಮುಕ್ತ ಕರ್ನಾಟಕ” ಆಗಲಿ, ಇದನ್ನು ಮಾಡಿ ತೋರಿಸಿ ಎಂದರು.

ಇಂದು ನಾನೇ ಬಿಡುಗಡೆ ಮಾಡಿದ ಪೀಕ್ ಕ್ಯಾಪ್ ಮಾದರಿಯನ್ನೂ ಆಯ್ಕೆ ಮಾಡಿದ್ದು ಕೂಡ ನಾನೆ. 1956 ರಿಂದ ಸುಮಾರು 70 ವರ್ಷಗಳಿಂದ ಇದ್ದ ಒಂದೇ ಮಾದರಿಯ ಕ್ಯಾಪ್ ಅನ್ನು ಇಂದು ಬದಲಾಯಿಸಿದ್ದೇವೆ. ಅಧಿಕಾರಿ ಮತ್ತು ಸಿಬ್ಬಂದಿಗೆ ಒಂದೇ ಮಾದರಿ ಕ್ಯಾಪ್ ಒದಗಿಸಲಾಗಿದ್ದು ಇದರಿಂದ ನಿಮ್ಮ ಆತ್ಮ ವಿಶ್ವಾಸ ಹೆಚ್ಚಾಗಲಿ ಎಂದು ಹೇಳಿದರು.

ಕೇವಲ ಕ್ಯಾಪ್ ಬದಲಾಗುವುದಲ್ಲ. ನಿಮ್ಮ ಕಾರ್ಯಕ್ಷಮತೆಯೂ ಬದಲಾಗಲಿ. ಪೊಲೀಸ್ ಇಲಾಖೆಯ ದಕ್ಷತೆಯಿಂದ ಸರ್ಕಾರಕ್ಕೆ ಒಳ್ಳೆ ಹೆಸರು ಬರುತ್ತದೆ. ಇಂಡಿಯಾ ಜಸ್ಟೀಸ್ ವರದಿಯಲ್ಲಿ ಕರ್ನಾಟಕ ಪೊಲೀಸ್ ನಂಬರ್ ಒನ್ ಸ್ಥಾನದಲ್ಲಿದೆ ಎನ್ನುವ ವರದಿ ರಾಜ್ಯದ ಘನತೆ ಹೆಚ್ಚಿಸಿದೆ ಎಂದರು.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

4 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

7 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

15 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

16 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago