706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.

737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

8 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

8 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

20 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

23 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

1 day ago