706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.

737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

9 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

17 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago