706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.

737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

1 hour ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

2 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

4 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

4 hours ago

ಯುವತಿಯ ಕುರಿತು ಅಪಪ್ರಚಾರದ ದ್ವೇಷ: ರೌಡಿ ಶೀಟರ್ ಖಲೀಮ್‌ನ ಬರ್ಬರ ಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಕುಟುಂಬದ ಬಗ್ಗೆ ಅವಹೇಳನ ಆರೋಪ: 7 ಮಂದಿಯ ತಂಡದ ಸಂಚು, 5 ಆರೋಪಿಗಳ ಬಂಧನ

ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ರೌಡಿ ಶೀಟರ್ ಖಲೀಮ್ (35)…

8 hours ago

ನಗರಸಭೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಸೌಕರ್ಯ ಕೊರತೆ: ಜನ ಹೈರಾಣ

ರೇಷ್ಮೆ ನಗರಿ, ಕೈಗಾರಿಕಾ ನಗರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ದೊಡ್ಡಬಳ್ಳಾಪುರ ನಗರ ಇಂದು ಅಭಿವೃದ್ಧಿಯ ಅವಕಾಶಗಳ ಜೊತೆಗೆ ಮೂಲ ಸಮಸ್ಯೆಗಳ…

10 hours ago