706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.

737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

2 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

5 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

13 hours ago

ನಾಯಿ ಕಡಿತದ ಆತಂಕಕ್ಕೆ ಲಸಿಕೆಯ ಕವಚ: ರೇಬೀಸ್ ನಿಯಂತ್ರಣಕ್ಕೆ 32 ಸಾವಿರ ಲಸಿಕೆ

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…

14 hours ago

2028ರ ಚುನಾವಣೆಗೆ ಜಾಲತಾಣವೇ ಅಸ್ತ್ರ- ಸಿಎಂಆರ್ ಶ್ರೀನಾಥ್

ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…

1 day ago

ಗಣೇಶ ವಿಸರ್ಜನೆ ವೇಳೆ ಮುಂಜಾಗ್ರತೆ ವಹಿಸಲು ರೈತ ಸಂಘ ಒತ್ತಾಯ: ಕೃಷಿ ಹೊಂಡ, ಕೆರೆ-ಕುಂಟೆಗಳಲ್ಲಿ ವಿಸರ್ಜನೆಗೆ ಕಡಿವಾಣ ಹಾಕಿ: ಜಿಲ್ಲಾಧಿಕಾರಿಗೆ ಮನವಿ

ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…

1 day ago