706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.

179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.

737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

60 minutes ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

5 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

14 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

21 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

22 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago