2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ ಮಾಡುವ ವಿಶೇಷ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ 737 ಮತದಾರರ ಪೈಕಿ 706 ಮಂದಿ ಇದರ ಅವಕಾಶ ಪಡೆದುಕೊಂಡು ಮನೆಯಿಂದಲೇ ಮತದಾನ ಮಾಡಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಎನ್ ಶಿವಶಂಕರ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ 178-ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ 120 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 37 ವಿಕಲಚೇತನ ಮತದಾರರು ಸೇರಿ ಒಟ್ಟು 157 ಮತದಾರರ ಪೈಕಿ 147(ಶೇ.93.63%)ಮಂದಿ ಮತದಾರರು ಮನೆಯಿಂದಲೇ ಮತದಾನ ಮಾಡಿದ್ದಾರೆ.
179-ದೇವನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿನ ಒಟ್ಟು 85 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 24 ವಿಕಲಚೇತನ ಮತದಾರರು ಸೇರಿ ಒಟ್ಟು 109 ಮತದಾರರ ಪೈಕಿ 104(ಶೇ.95.41%)ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.
180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿನ 159 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 107 ವಿಕಲಚೇತನನರು ಸೇರಿ ಒಟ್ಟು 266 ಮತದಾರರಲ್ಲಿ 257(96.62%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.
181-ನೆಲಮಂಗಲ ವಿಧಾನಸಭಾ ಕ್ಷೇತ್ರದಲ್ಲಿನ 148 ಮಂದಿ 85 ವರ್ಷ ತುಂಬಿದ ಹಿರಿಯರು ಹಾಗೂ 57 ವಿಕಲಚೇತನ ಮತದಾರರು ಸೇರಿ ಒಟ್ಟು 205 ಮತದಾರರ ಪೈಕಿ 198(96.59%) ಮಂದಿ ಮನೆಯಿಂದಲೇ ಮತದಾನ ಮಾಡಿದ್ದಾರೆ.
ಒಟ್ಟಾರೆ ಜಿಲ್ಲೆಯಲ್ಲಿ 512 ಮಂದಿ 85 ವರ್ಷ ತುಂಬಿದ ಹಿರಿಯ ನಾಗರಿಕರು ಹಾಗೂ 225 ವಿಕಲಚೇತನರ ಮತದಾರರು ಸೇರಿ ಒಟ್ಟು 737 ಮಂದಿ ಮತದಾರರ ಪೈಕಿ 706(95.79%) ಮತದಾರರು ಮನೆಯಿಂದಲೇ ಮತದಾನ ಸೌಲಭ್ಯವನ್ನು ಪಡೆದುಕೊಂಡು ಮತದಾನ ಮಾಡಿದ್ದಾರೆ.
737 ಮತದಾರರ ಪೈಕಿ 12 ಮಂದಿ ಮೃತಪಟ್ಟಿದ್ದು,12 ಮಂದಿ ಆಸ್ಪತ್ರೆಯಲ್ಲಿದ್ದು, 11 ಮಂದಿ ಮತದಾರರು ಅಲಭ್ಯವಿದ್ದರು. ಅಲಭ್ಯವಿದ್ದ ಮತದಾರರಿಗೆ ಉಳಿದ ದಿನ ಚುನಾವಣಾ ಅಧಿಕಾರಿಗಳು, ಸಿಬ್ಬಂದಿಗಳು ಪುನಃ ಅವರ ಮನೆಗಳಿಗೆ ತೆರಳಿ ಮತದಾನ ಮಾಡಿಸಿಕೊಳ್ಳಲಿದ್ದಾರೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್ ಶಿವಶಂಕರ ಅವರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…