ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.
ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.
ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.
ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.
ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.
ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…
ಜಗತ್ತಿನಲ್ಲಿ ಅತ್ಯಂತ ವೇಗವಾಗಿ ಚಲಿಸುವುದು ಮನಸ್ಸು. ಕ್ಷಣ ಮಾತ್ರದಲ್ಲಿ ಲೆಕ್ಕಕ್ಕೂ ಸಿಗದಷ್ಟು ದೂರ ಚಲಿಸಬಲ್ಲದು. ಬೆಳಕಿನ ವೇಗವೂ ಅದಕ್ಕೆ ಸಾಟಿಯಲ್ಲ.....…
ತಾಲ್ಲೂಕಿನ ಹಾಡೋನಹಳ್ಳಿ ಗ್ರಾಮದ ನಿರ್ಜನ ಪ್ರದೇಶದಲ್ಲಿ ಒಂದು ವಾರದ ಹಿಂದೆ ದೊರೆತ ಐದು ದಿನಗಳ ನವಜಾತ ಶಿಶುವಿನ ಜೀವ ಉಳಿಸುವಲ್ಲಿ…
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…