75ನೇ ಗಣರಾಜ್ಯೋತ್ಸವ ಹಿನ್ನೆಲೆ: ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಆಯೋಜನೆ

ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ‌ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.

ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಉಮಾಪತಿ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ‌ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.

ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ‌ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.

ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.

ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ‌ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ‌ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.

ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

Ramesh Babu

Journalist

Recent Posts

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

4 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

16 hours ago

ಬಾಶೆಟ್ಟಿಹಳ್ಳಿ ಪಪಂ ಚುನಾವಣೆ: ಶೇ.78ರಷ್ಟು ಮತದಾನ: ನಕಲಿ ಮತದಾನಕ್ಕೆ ಯತ್ನಿಸಿದ ವ್ಯಕ್ತಿಯನ್ನು ವಶಕ್ಕೆ ಪಡೆದ ಪೊಲೀಸರು: ಕುಡಿದು ಚುನಾವಣೆ ಕೆಲಸಕ್ಕೆ ಬಂದ ಶಿಕ್ಷಕ

ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆ ಭಾನುವಾರ ಸೂಸುತ್ರವಾಗಿ ಪೂರ್ಣಗೊಂಡಿದೆ. ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ, ತಾಲೂಕು ಆಡಳಿತ, ಬಾಶೆಟ್ಟಿಹಳ್ಳಿ…

17 hours ago

ಒಂಟಿ ಮನೆ ಸುತ್ತಾ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳು: ಗಾಬರಿಗೊಂಡ ಮಹಿಳೆ: ಗ್ರಾಮಸ್ಥರ ಕೈಗೆ ಸಿಕ್ಕ ಆಸಾಮಿಗಳು, ಸದ್ಯ ವಶಕ್ಕೆ ಪಡೆದ ಪೊಲೀಸರು

ಒಂಟಿ ಮನೆ ಬಳಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರು ವಿದೇಶಿ ಪ್ರಜೆಗಳನ್ನು ಊರಿನ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಇಂದು…

17 hours ago

ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸಿ ಗೋವಿಂದಪ್ಪ ಅವಿರೋಧ ಆಯ್ಕೆ

ಯಲಹಂಕ ತಾಲೂಕಿನ ಜಾಲ ಹೋಬಳಿಯ ಚಿಕ್ಕಜಾಲ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಎ.ಸಿ. ಗೋವಿಂದಪ್ಪ ಅವಿರೋಧವಾಗಿ…

17 hours ago

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಜಿಲ್ಲೆಯ 99,828 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ- ಸಚಿವ ಕೆ.ಎಚ್ ಮುನಿಯಪ್ಪ

ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮ್ಮೆ ಸಾಬೀತು ಮಾಡೋಣ…

1 day ago