ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.
ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.
ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.
ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.
ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.
ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಬೆಂಗಳೂರು: ಬೆಂಗಳೂರು ನಗರ ಹಾಗೂ ಗ್ರಾಮಾಂತರ ಭಾಗಗಳಿಗೆ ಪ್ರಯಾಣಿಸುವ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬಿಎಂಟಿಸಿ(Bangalore Metropolitan Transport Corporation) ಮೇ 18ರಿಂದ…
ದೊಡ್ಡಬಳ್ಳಾಪುರ: ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.…
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ರಾಜ್ಯ ಸರ್ಕಾರ ಖಂಡಿಸಲಿದ್ದು, ಬೆಲೆ ಏರಿಕೆಯನ್ನು ಹಿಂಪಡೆಯಲು ಒತ್ತಾಯಿಸುತ್ತೇವೆ ಎಂದು ಸಿಎಂ…
ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಕಳೆದ ಆರ್ಥಿಕ ವರ್ಷ ಜಿಲ್ಲೆಯಲ್ಲಿ 24 ಬಾಲ್ಯ ವಿವಾಹ ಪ್ರಕರಣಗಳನ್ನು…
ಸರ್ಕಾರಿ ಸಂಸ್ಥೆಗಳು ಹಾಗೂ ಸರ್ಕಾರಿ ಕೆಲಸಗಳ ಸೇವೆಯಲ್ಲಿ ಕೆ-ಜಿಐಎಸ್ 2.0 ಪೋರ್ಟಲ್ ಬಳಕೆಯಿಂದ ಆಡಳಿತದ ದಕ್ಷತೆ ಹೆಚ್ಚಲಿದೆ ಎಂದು ಜಿಲ್ಲಾಧಿಕಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ 349 ಗೃಹರಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳು ಮೇ…