75ನೇ ಗಣರಾಜ್ಯೋತ್ಸವ ಹಿನ್ನೆಲೆ: ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಆಯೋಜನೆ

ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ‌ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.

ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಉಮಾಪತಿ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ‌ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.

ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ‌ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.

ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.

ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ‌ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ‌ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.

ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

1 hour ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

3 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

15 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

16 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

17 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

21 hours ago