75ನೇ ಗಣರಾಜ್ಯೋತ್ಸವ ಹಿನ್ನೆಲೆ: ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಆಯೋಜನೆ

ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ‌ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.

ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಉಮಾಪತಿ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ‌ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.

ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ‌ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.

ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.

ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ‌ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ‌ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.

ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

Ramesh Babu

Journalist

Recent Posts

ಬೈಕ್ ಕಳ್ಳತನ ಪ್ರಕರಣ ಭೇದಿಸಿದ ವಿಜಯಪುರ ಪೊಲೀಸರು; ಲಕ್ಷಾಂತರ ಮೌಲ್ಯದ 42 ದ್ವಿಚಕ್ರ ವಾಹನ ವಶ

ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…

32 minutes ago

ಪರೀಕ್ಷಾ ಅಕ್ರಮಗಳು……

ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…

3 hours ago

ಮುತ್ತತ್ತಿಯಲ್ಲಿ ದುರಂತ: ಕಾವೇರಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ ಐವರು ಸಾವು

ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…

4 hours ago

ಹುಸ್ಕೂರಲ್ಲಿ ಶ್ರೀ ಸಪ್ಪಲಮ್ಮದೇವಿ–ದುರ್ಗಮ್ಮದೇವಿ ಜಾತ್ರಾ ಮಹೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…

18 hours ago

ಗೊಬ್ಬರದ ಚೀಲಗಳಡಿ ₹1.65 ಕೋಟಿ ಮೌಲ್ಯದ ಗೋವಾ ಮದ್ಯ ಸಾಗಾಟ: ವಿಜಯಪುರ ಪೊಲೀಸರಿಂದ ಅಂತರರಾಜ್ಯ ಜಾಲ ಪತ್ತೆ

ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…

20 hours ago

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

23 hours ago