75ನೇ ಗಣರಾಜ್ಯೋತ್ಸವ ಹಿನ್ನೆಲೆ: ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಆಯೋಜನೆ

ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ‌ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.

ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ‌ ನಿರ್ದೇಶಕ ಉಮಾಪತಿ ತಿಳಿಸಿದರು.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ‌ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.

ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ‌ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.

ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.

ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ‌ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ‌ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.

ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.

Ramesh Babu

Journalist

Recent Posts

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

3 hours ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

1 day ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

1 day ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago