ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.
ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.
ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.
ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.
ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.
ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…
ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…
ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…
ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…
ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…
ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…