ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.
ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.
ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.
ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.
ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.
ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…