ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.
ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.
ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.
ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.
ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.
ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…
Welcome to our thorough overview on the very best online slots online casinos. If you're…
ಪರಿಶಿಷ್ಟ ಜಾತಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಸಚಿವ ಸಂಪುಟ ಸಭೆ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಂಡಿದೆ. ಎಡ, ಬಲ…