ದೊಡ್ಡಬಳ್ಳಾಪುರ: 75ನೇ ಗಣರಾಜ್ಯೋತ್ಸವ ಅಂಗವಾಗಿ ಹಮ್ಮಿಕೊಂಡಿರುವ ಸಂವಿಧಾನ ಜಾಗೃತಿ ಜಾಥಾ ಶನಿವಾರ ದೊಡ್ಡಬಳ್ಳಾಪುರ ತಾಲೂಕು ಪ್ರವೇಶಿಸಲಿದೆ.
ಫೆ.10 ರಿಂದ 17 ರವರೆಗೆ ತಾಲೂಕಿನ ವಿವಿಧ ಗ್ರಾಮ ಪಂಚಾಯ್ತಿಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಉಮಾಪತಿ ತಿಳಿಸಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶನಿವಾರ ಬೆಳಿಗ್ಗೆ 9ಕ್ಕೆ ತಾಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯ್ತಿಗೆ ಆಗಮಿಸಲಿದೆ. ಶಾಸಕರು ಸೇರಿ ಸ್ಥಳೀಯ ಜನಪ್ರತಿನಿಧಿಗಳು ಜಾಥಾದಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.
ಹೆಗ್ಗಡಿಹಳ್ಳಿ ಗ್ರಾ.ಪಂ ಬಳಿಕ ಜಾಗೃತಿ ಜಾಥಾ ಮೆಳೆಕೋಟೆ, ತೂಬಗೆರೆ, ಎಸ್.ಎಸ್.ಘಾಟಿಗೆ ತೆರಳಲಿದೆ. ಶ್ರೀಕ್ಷೇತ್ರ ಘಾಟಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಮೊದಲ ದಿನದ ಜಾಗೃತಿ ಜಾಥಾ ಮುಕ್ತಾಯವಾಗಲಿದೆ.
ಫೆ. 11 ರಂದು ಹಾಡೋನಹಳ್ಳಿ, ರಾಜಘಟ್ಟ, ಕೊನಘಟ್ಟ, ಹೊಸಹಳ್ಳಿ ಗ್ರಾ.ಪಂ ನಲ್ಲಿ ಜಾಥಾ ನಡೆಯಲಿದೆ. ಫೆ.12 ರಂದು ಆರೂಢಿ, ಸಾಸಲು, ಭಕ್ತರಹಳ್ಳಿ ಹಾಗೂ ಸಕ್ಕರೆ ಗೊಲ್ಲಹಳ್ಳಿಯಲ್ಲಿ ಜಾಥಾ ಸಾಗಲಿದೆ. ಫೆ.13 ರಂದು ದೊಡ್ಡಬೆಳವಂಗಲ, ಹುಲಿಕುಂಟೆ, ತಿಪ್ಪೂರು ಹಾಗೂ ಹಣಬೆ ಗ್ರಾ.ಪಂ.ಗಳಲ್ಲಿ ಸಂವಿಧಾನ ಜಾಥಾ ನಡೆಯಲಿದೆ.
ಫೆ.14 ರಂದು ಕೆಸ್ತೂರು, ಹೊನ್ನಾವರ, ಕನಸವಾಡಿ, ಚನ್ನದೇವಿ ಅಗ್ರಹಾರದಲ್ಲಿ ಜಾಥಾ ಸಾಗಲಿದೆ. ಫೆ.15 ರಂದು ಕಾಡನೂರು, ದೊಡ್ಡತುಮಕೂರು, ಮಜರಾ ಹೊಸಹಳ್ಳಿ, ಹಾದ್ರಿಪುರ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ.
ಫೆ.16 ರಂದು ಕಂಟನಕುಂಟೆ, ಕೊಡಿಗೇಹಳ್ಳಿ, ದರ್ಗಾ ಜೋಗಿಹಳ್ಳಿ, ಅರಳು ಮಲ್ಲಿಗೆ ಗ್ರಾ.ಪಂ.ನಲ್ಲಿ ಜಾಥಾ ನಡೆಯಲಿದೆ. ಕೊನೆಯ ದಿನವಾದ ಫೆ.17 ರಂದು ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ. ಪ್ರತಿ ಪಂಚಾಯ್ತಿಯಲ್ಲಿ ನಡೆಯುವ ಜಾಗೃತಿ ಜಾಥಾದಲ್ಲಿ ಐದು ಸಾವಿರ ಜನರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಉಮಾಪತಿ ತಿಳಿಸಿದರು.
ಜಾಗೃತಿ ಜಾಥಾ ಯಶಸ್ವಿಗೆ ಎಲ್ಲ ದಲಿತಪರ, ಕನ್ನಡಪರ ಸಂಘಟನೆಗಳು ಶ್ರಮಿಸುವ ಜೊತೆಗೆ ಜಾಥಾದಲ್ಲಿ ಭಾಗವಹಿಸಬೇಕು ಎಂದು ಅವರು ಮನವಿ ಮಾಡಿದರು.
ಭಾರತದ ಬಹಳಷ್ಟು ಮಧ್ಯಮ ವರ್ಗದ ಜನರಲ್ಲಿ ಜೀವನೋತ್ಸಾಹ ಕಡಿಮೆಯಾಗುತ್ತಿದೇಯೇ ಎಂಬ ಅನುಮಾನ ಶುರುವಾಗಿದೆ. ನಿಜಕ್ಕೂ ಬೃಹತ್ ಸಂಖ್ಯೆಯ ಮಧ್ಯಮ ವರ್ಗದವರು…
ದೊಡ್ಡಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಆತಂಕಕಾರಿ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಜನಸಾಮಾನ್ಯರ ನೆಮ್ಮದಿ ಕದಡಿದೆ. ಮಹಿಳೆಯರ ಚಿನ್ನಾಭರಣ,…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಸೇರಿದಂತೆ ತಮ್ಮೊಂದಿಗೆ ಬುಧವಾರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ 13 ಸಚಿವರಿಗೆ ಗುರುವಾರ ಖಾತೆ…
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…