77ನೇ‌ ಸ್ವಾತಂತ್ರ್ಯ ದಿನಾಚರಣೆ: ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ

ದೇಶಾದ್ಯಂತ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಈ ಹಿನ್ನೆಲೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದ ವತಿಯಿಂದ ನಗರದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಲಾಯಿತು.

ಈ ವೇಳೆ ದೊಡ್ಡಬಳ್ಳಾಪುರ ತಾಲೂಕು ಕರವೇ ಅಧ್ಯಕ್ಷ ಪುರುಷೋತ್ತಮ ಗೌಡ, ಎಂ.ಡಿ ಪುಟ್ಟೇಗೌಡ, ಅನ್ನಪೂರ್ಣ, ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *