Categories: ಲೇಖನ

78ನೇ ಭಾರತದ ಸ್ವಾತಂತ್ರ್ಯೋತ್ಸವ ಸಂಭ್ರಮ

ಎಲ್ಲಾ ಸರಿ ತಪ್ಪುಗಳ ನಡುವೆ ಭಾರತ ಇತಿಹಾಸದ ಸ್ವರ್ಣಯುಗ ಎಂದರೆ ಈ 77 ವರ್ಷಗಳು, ಅದರಲ್ಲೂ ಕಳೆದ 25 ವರ್ಷಗಳು ನಾಗರಿಕ ಸ್ವಾತಂತ್ರ್ಯದ ನೆಲೆಯಲ್ಲಿ ಅತ್ಯಂತ ಮಹತ್ವದ ಸುವರ್ಣ ಯುಗ ಎಂದು ಕರೆಯಬಹುದು.

ಅದಕ್ಕಾಗಿ ಭಾರತದ ಸಂವಿಧಾನಕ್ಕೆ ಹೃದಯ ಪೂರ್ವಕ ಅಭಿನಂದನೆಗಳು ಮತ್ತು ಧನ್ಯವಾದಗಳನ್ನು ಅರ್ಪಿಸುತ್ತಾ……

ಕೊರತೆಗಳಿವೆ, ಸಮಸ್ಯೆಗಳಿವೆ, ಶೋಷಣೆಗಳಿವೆ, ಬಲಾಡ್ಯರ ದೌರ್ಜನ್ಯವಿದೆ. ಅದೆಲ್ಲದರ ನಡುವೆ ಹಕ್ಕುಗಳಿಗಾಗಿ‌ ಧ್ವನಿ ಎತ್ತುವ ವ್ಯವಸ್ಥೆಯಿದೆ ಎಂಬ ಸಮಾಧಾನದೊಂದಿಗೆ….

ಜನ ಜಾಗೃತಿ ಮತ್ತು ಸಂವಿಧಾನವೇ ನಿಜವಾದ ಧರ್ಮ ಎಂಬ ಮನೋಭಾವ ಸರ್ವವ್ಯಾಪಿಯಾಗಿ ಬಲವಾಗುತ್ತಿರುವ ಕಾರಣದಿಂದಾಗಿ ಗುಂಪು ನಾಯಕತ್ವ, ಸರ್ವಾಧಿಕಾರ, ರಾಜಪ್ರಭುತ್ವದ, ದಾಳಿ ಕೋರರ ಆಡಳಿತ ಮುಂತಾದ ಸಮಯದಲ್ಲಿ ಮನುಷ್ಯರ ಮೂಲಭೂತ ಅವಶ್ಯಕತೆಯಾದ ವ್ಯಕ್ತಿ ಸ್ವಾತಂತ್ರ್ಯ ಈ ಮಟ್ಟದಲ್ಲಿ ಇರಲಿಲ್ಲ ಮತ್ತು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ, ಸ್ವಾತಂತ್ರ್ಯ ಸಹ ಈಗಿನಷ್ಟು ಇರಲಿಲ್ಲ ಎಂಬ ಕಾರಣಗಳಿಗಾಗಿ ಇದನ್ನು ಸ್ವರ್ಣ ಯುಗ ಎಂದು ಕರೆಯಲು ಮನಸ್ಸು ಬಯಸುತ್ತಿದೆ.

ಈ 77 ವರ್ಷಗಳನ್ನು ಹೊಗಳಲೂ ಕಾರಣಗಳಿವೆ, ತೆಗಳಲೂ ಕಾರಣಗಳಿವೆ, ಸಮಾಧಾನ ಪಟ್ಟುಕೊಳ್ಳಲು ಸಹ ಕಾರಣಗಳಿವೆ. ಈಗ ಅದನ್ನು ಮೀರಿ ನಮ್ಮ ಕರ್ತವ್ಯಗಳ ಕಡೆ ಗಮನ ಕೊಡುವ ಸಮಯ ಬಂದಿದೆ.

ಭಾರತವೆಂಬ ಭೂ ಪ್ರದೇಶದ ಗಾಳಿ, ನೀರು, ಆಹಾರ ಮಲಿನವಾಗುತ್ತಿರುವುದು ಅತ್ಯಂತ ಗಂಭೀರ ಸಮಸ್ಯೆ. ಇದರಿಂದಾಗಿ ಭಾರತೀಯರ ದೇಹ ಮತ್ತು ಮನಸ್ಸು ದುರ್ಬಲವಾಗುತ್ತಿದೆ. ಅದನ್ನು ಶುದ್ಧವಾಗಿ ಉಳಿಸಿಕೊಳ್ಳುವುದು ಪ್ರತಿಯೊಬ್ಬ ಭಾರತೀಯ ನಾಗರಿಕರ ಕರ್ತವ್ಯ.

ಮಾನವೀಯ ಮೌಲ್ಯಗಳು ಅಪಾಯಕಾರಿ ಹಂತವನ್ನು ಮೀರಿ ವ್ಯಾಪಾರೀಕರಣವಾಗಿದೆ. ಪ್ರೀತಿ, ಕರಣೆ, ತಾಳ್ಮೆ, ತ್ಯಾಗ, ಸಭ್ಯತೆ, ಸಹಕಾರ, ಸಮನ್ವಯ ಎಲ್ಲವೂ ಹಣ ಅಧಿಕಾರದ ಮೂಲದಿಂದ ಅಳೆಯುವ ಮಾನದಂಡ ಭಾರತದ ಮೂಲ‌ ಸಂಸ್ಕೃತಿಗೆ ಮಾಡುವ ಅವಮಾನ. ಅದನ್ನು ಪುನರುತ್ಥಾನ ಮಾಡುವುದು ನಮ್ಮೆಲ್ಲರ ಕರ್ತವ್ಯ.

ಸಾಮಾಜಿಕ ಸಾಮರಸ್ಯ ಮತ್ತು ನೈತಿಕ ಮೌಲ್ಯಗಳು ತೀರಾ ಕೆಳಹಂತಕ್ಕೆ ತಲುಪಿದೆ. ಜಾತಿ, ಧರ್ಮದ ಹೆಸರಿನಲ್ಲಿ ಹಿಂಸೆ ತುಂಬಾ ಹೆಚ್ಚಾಗಿದೆ. ಒಳ್ಳೆಯವರು ಒಳ್ಳೆಯವರಾಗಿಯೇ ಬದುಕುವುದು ‌ಸಾಧ್ಯವಿಲ್ಲ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ. ಭ್ರಷ್ಟಾಚಾರ ವ್ಯಾಪಕವಾಗಿದೆ. ಅದನ್ನು ಮತ್ತೆ ಸರಿಯಾದ ಮಾರ್ಗದಲ್ಲಿ ಮುನ್ನಡೆಸುವ ಜವಾಬ್ದಾರಿ ನಮ್ಮ ಮೇಲಿದೆ.

ಇದು ಮೂಲಭೂತವಾಗಿ ಪರಿವರ್ತನೆ ಆಗಬೇಕಾದ ಸಮಸ್ಯೆಗಳು. ನಂತರ ಈ ಮೂಲಕ ಉಳಿದ ಸಮಸ್ಯೆಗಳು ಸಹಜವಾಗಿ ಬದಲಾಗುತ್ತದೆ.

ಆದರೂ ನಮ್ಮ ದೇಶದ ವೈವಿಧ್ಯತೆ ಒಮ್ಮೆ ನೋಡಿ…..

ಮೇಲೆ ನೋಡಿದರೆ ಹಿಮರಾಶಿಯ ಕಾಶ್ಮೀರ,

ಕೆಳಗೆ ನೋಡಿದರೆ ನೀಲಿ ಸಾಗರದ ಕನ್ಯಾಕುಮಾರಿ,

ಪೂರ್ವಕ್ಕೆ ಸಪ್ತ ಸೋದರಿಯರ ಸುಂದರ ನಾಡು,

ಪಶ್ಚಿಮದಲ್ಲಿ ವಾಣಿಜ್ಯ ನಗರಿಯ ಬೀಡು,

ಮಧ್ಯದಲ್ಲಿ ವಿಂಧ್ಯ ಗಿರಿ,

ಅಗೋ ಅಲ್ಲಿ ನೋಡು ಹರಿಯುತ್ತಿದ್ದಾಳೆ ಗಂಗೆ,

ಇಗೋ ಇಲ್ಲಿ ನೋಡು ನಲಿಯುತ್ತಿದ್ದಾಳೆ ಕಾವೇರಿ,

ಅಲ್ಲಲ್ಲಿ ಮುದುನೀಡುವ ಮನೋಹರ ನದಿ ಕಾಡುಗಳು,

ಅಲ್ಲಿಯೇ ಹುಲಿ ಸಿಂಹಗಳ ಘರ್ಜನೆ,

ನವಿಲ ನರ್ತನ, ಕೋಗಿಲೆಯ ಕುಹೂ ಕುಹೂ ಗಾನ,

ಹಾಡಲೊಂದು ಶಾಸ್ತ್ರೀಯ ಸಂಗೀತ,

ಕೇಳಲೊಂದು ಕರ್ನಾಟಕ ಸಂಗೀತ,

ಅಲ್ಲೊಂದಿಷ್ಟು ಮರುಭೂಮಿ,

ಇಲ್ಲೊಂದಿಷ್ಟು ಪಶ್ಚಿಮ ಘಟ್ಟಗಳು,

ಮತ್ತೊಂದಿಷ್ಟು ನಿತ್ಯ ಹರಿದ್ವರ್ಣದ ಕಾಡುಗಳು,

ಓದಲು ರಾಮಾಯಣ, ಮಹಾಭಾರತ,

ಕಲಿಯಲು ಬೃಹತ್ ಸಂವಿಧಾನ,

ಅರಿಯಲೊಬ್ಬ ಬುದ್ದ,

ಅಳವಡಿಸಿಕೊಳ್ಳಲೊಬ್ಬ ಬಸವ,

ಬುದ್ಧಿ ಹೇಳಲೊಬ್ಬ ವಿವೇಕಾನಂದ,

ತಿಳುವಳಿಕೆ ಮೂಡಿಸಲೊಬ್ಬ ಅಂಬೇಡ್ಕರ್,

ಎಲ್ಲರೊಳಗೊಬ್ಬ ಗಾಂಧಿ,

ಗುರುಹಿರಿಯರೆಂಬ ಗೌರವ,

ಮಕ್ಕಳೇ ಮಾಣಿಕ್ಯವೆಂಬ ಸಂಸ್ಕಾರ,

ಆಡಲು ಹಾಕಿ, ನೋಡಲು ಕ್ರಿಕೆಟ್,

ಕಾಯಲೊಬ್ಬ ಪ್ರಧಾನಮಂತ್ರಿ,

ಕರುಣಿಸಲೊಬ್ಬ ಮುಖ್ಯಮಂತ್ರಿ,

ಸಂಭ್ರಮಿಸಲು ಸಂಕ್ರಾಂತಿ,

ಸ್ವಾಗತಿಸಲು ಯುಗಾದಿ,

ಕುಣಿದು ಕುಪ್ಪಳಿಸಲು ಗಣೇಶ,

ಮನರಂಜಿಸಲು ದೀಪಾವಳಿ,

ವಿಜೃಂಬಿಸಲು ದಸರಾ,

ಭಾವೈಕ್ಯತೆಯ ರಂಜಾನ್,

ರಂಗುರಂಗಿನ ಕ್ರಿಸ್ ಮಸ್,

ಸತ್ಯ, ಅಹಿಂಸೆ, ಮಾನವೀಯತೆ ಎಂಬ ಸಂಪ್ರದಾಯ,

ದಯವೇ ಧರ್ಮದ ಮೂಲವಯ್ಯ ಎಂಬ ಸಂಸ್ಕೃತಿ,

ಧನ್ಯ ಈ ನೆಲವೇ ಧನ್ಯ ಧನ್ಯ,

ನನ್ನುಸಿರಾಗಿರುವ ಭಾರತ ದೇಶವೇ,

ನಿನಗೆ ನನ್ನ ಶುಭಾಶಯದ ಹಂಗೇಕೆ,

ನೀನಿರುವುದೇ ನನಗಾಗಿ,

ನನ್ನ ಜೀವವಿರುವುದೇ ನಿನಗಾಗಿ,

ಭಿನ್ನತೆಯಲ್ಲೂ ಐಕ್ಯತೆ,

ಅದುವೇ,
ನಮ್ಮ ಭಾರತೀಯ ಗಣರಾಜ್ಯ.

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ – ಮನೆಗಳಲ್ಲಿ – ಮತಗಳಲ್ಲಿ – ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್. ಕೆ

Ramesh Babu

Journalist

Recent Posts

1 ವರ್ಷ 4 ತಿಂಗಳ ಮಗುವಿನ ಕಣ್ಣು ದಾನ: ಸಾವಿನಲ್ಲೂ ಮಾನವೀಯತೆ ಮೆರೆದ ಕುಟುಂಬ

ದೊಡ್ಡಬಳ್ಳಾಪುರ: ನಗರದ ದೇವರಾಜನಗರ ನಿವಾಸಿಗಳಾದ ಭರತ್ ಅವರ 1 ವರ್ಷ 4 ತಿಂಗಳ ಮಗ ಪೋಷಕ್ ಆರೋಗ್ಯದ ವ್ಯತ್ಯಯದಿಂದ ವಿಧಿವಶರಾದ…

3 hours ago

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಶಿಕ್ಷಣಕ್ಕೆ ‌ಪೂರಕ- ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ

ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿಯು ಶಿಕ್ಷಣಕ್ಕೆ ‌ಪೂರಕವಾಗಿದೆ. ಇದನ್ನು ‌ಸರ್ಕಾರ ಅರ್ಥ ಮಾಡಿಕೊಳ್ಳಬೇಕು ಎಂದು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್‌ನ…

3 hours ago

ಫ್ರಿಡ್ಜ್ ಕ್ಲೀನ್ ಮಾಡುವಾಗ ವಿದ್ಯುತ್ ಶಾಕ್: ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಫ್ರಿಡ್ಜ್ ಸ್ವಚ್ಛಗೊಳಿಸುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ನಗರದ ಚೈತನ್ಯನಗರದಲ್ಲಿ ನಡೆದಿದೆ. ಮೃತರನ್ನು…

9 hours ago

“ಎಲ್ಲವೂ ವಿಫಲವಾದಾಗ ತಾಳ್ಮೆ ಸಫಲವಾಗುತ್ತದೆ”…….

" ಎಲ್ಲವೂ ವಿಫಲವಾದಾಗ ತಾಳ್ಮೆಯು ಸಫಲವಾಗುತ್ತದೆ....." ಎಂಬ ದಾರ್ಶನಿಕರ ಮಾತು ಎಷ್ಟೊಂದು ಅನುಭಾವದ ಅರ್ಥಪೂರ್ಣ ಮಾತಲ್ಲವೇ.... ಇದಕ್ಕೆ ಅತ್ಯಂತ ನೈಜ…

18 hours ago

ಎಲ್ರಿ ಅಧಿಕಾರಿಗಳು, ಜನರ ಸಮಸ್ಯೆ ಕೇಳೋದ್ಯಾರು..?- ತಹಶೀಲ್ದಾರ್ ಮಲ್ಲಪ್ಪ ಕೆ ಯರಗೋಳಗೆ ಸಚಿವ ಕೆ.ಎಚ್ ಮುನಿಯಪ್ಪ ತೀವ್ರ ತರಾಟೆ

ಎಲ್ರಿ ಅಧಿಕಾರಿಗಳು, ಜನ್ರ ಸಮಸ್ಯೆ ಕೇಳೋದ್ಯಾರು..?ಜನ ನನಗೆ ವೋಟ್ ಹಾಕಿದ್ಯಾಕೆ..? ಅಧಿಕಾರಿಗಳು ಇಲ್ಲಿದ್ರೆ ಜನರ ಸಮಸ್ಯೆ ಕೂಡಲೇ ಬಗೆಹರಿಸಬಹುದಲ್ವಾ.. ವೋಟ್…

1 day ago

1 ಕೋಟಿ ರೂ. ವೆಚ್ಚದ ಸಿಸಿ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

ದೇವನಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿರುವ ಜೊತೆಗೆ ಜಿಲ್ಲೆಯ ಉಸ್ತುವಾರಿ ಮಂತ್ರಿಯಾಗಿದ್ದು, ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತಗಳ ಸರ್ವಾಂಗೀಣ ಅಭಿವೃದ್ಧಿಗಳಿಗೆ…

1 day ago