78 ನೇ ಸ್ವಾತಂತ್ರ್ಯ ದಿನಾಚರಣೆ: ಅ.2ಕ್ಕೆ ಜಿಲ್ಲಾ ಕ್ರೀಡಾಂಗಣ ಕಾಮಗಾರಿಗೆ ಭೂಮಿ ಪೂಜೆ-ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ದೇವನಹಳ್ಳಿ ಪಟ್ಟಣದ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ “78ನೇ ಸ್ವಾತಂತ್ರ್ಯೋತ್ಸವ” ಕಾರ್ಯಕ್ರಮದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು “ರಾಷ್ಟ್ರ ಧ್ವಜಾರೋಹಣ” ನೆರವೇರಿಸಿ “ತ್ರಿವರ್ಣ ಧ್ವಜ”ಕ್ಕೆ ಗೌರವ ವಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಚಿವರು ಹಾಗೂ ಗಣ್ಯರು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು.

ಅ.2ಕ್ಕೆ ಜಿಲ್ಲಾ ಕ್ರೀಡಾಂಗಣ ಕಾಮಗಾರಿಗೆ ಭೂಮಿ ಪೂಜೆ

ಜಿಲ್ಲಾ ಕ್ರೀಡಾಂಗಣಕ್ಕಾಗಿ ಕರ್ನಾಟಕ ಕೈಗಾರಿಕಾ ಪ್ರದೇಶಭಿವೃದ್ಧಿ ಮಂಡಳಿ ವತಿಯಿಂದ 20.24 ಎಕರೆ ಭೂಮಿಯನ್ನು ದೊಡ್ಡಬಳ್ಳಾಪುರ ತಾಲ್ಲೂಕು ಆದಿ ನಾರಾಯಣ ಹೊಸಹಳ್ಳಿ ಗ್ರಾಮದಲ್ಲಿ ಹಂಚಿಕೆ ಮಾಡಲಾಗಿದ್ದು, ಜಿಲ್ಲಾ ಕ್ರೀಡಾಂಗಣದ ಕಾಮಗಾರಿಯ ಪೂಜೆಯನ್ನು 2024 ಅಕ್ಟೋಬರ್ 02 ರ ಗಾಂಧಿ ಜಯಂತಿಯಂದು ನೆರವೇರಿಸಲಾಗುವುದು.
ದೇವನಹಳ್ಳಿ ಪಟ್ಟಣದ ಸೂಲಿಬೆಲೆ ಮುಖ್ಯ ರಸ್ತೆಯ ದೇವನಹಳ್ಳಿ ಟೌನ್ ಕ್ರೀಡಾಂಗಣಕ್ಕೆ ವಿಶೇಷ ಅನುದಾನದಡಿಯಲ್ಲಿ ಕ್ರೀಡಾಂಗಣ ಅಭಿವೃದ್ಧಿಗಾಗಿ 50 ಲಕ್ಷ ರೂ. ಮತ್ತು ದೇವನಹಳ್ಳಿ ಸರ್ಕಾರ ಆಸ್ಪತ್ರೆ ಹಿಂಭಾಗದ ದೇವನಹಳ್ಳಿ ತಾಲ್ಲೂಕು ಕ್ರೀಡಾಂಗಣಕ್ಕೆ ಸ್ಥಳೀಯ ಪ್ರದೇಶಭಿವೃದ್ಧಿ ಯೋಜನೆಯಡಿಯಲ್ಲಿ 01 ಕೋಟಿ ರೂ. ಅನುದಾನವನ್ನು ಅಭಿವೃದ್ಧಿಗೆ ನೀಡಲಾಗುವುದು.

*ಅಂಗಾಂಗ ದಾನ ಮಾಡಿದ ಕುಟುಂಬಗಳಿಗೆ ಸನ್ಮಾನ*

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅಂಗಾಂಗ ದಾನ ಮಾಡಿದ ಜಿಲ್ಲೆಯ 15 ಜನರ ಕುಟುಂಬಗಳಿಗೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರ ಸಹಿಯುಳ್ಳ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು.

*ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳದ ಪೋಸ್ಟರ್ ಬಿಡುಗಡೆ*

2024 ರ ಸೆಪ್ಟೆಂಬರ್ 13 ರಂದು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವು ದೇವನಹಳ್ಳಿ ಟೌನ್ ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದ್ದು, ಇದರ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಹಾಗೂ ಗಣ್ಯರು ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ’ದ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದರು.

*ನರೇಗಾ ಕೈಪಿಡಿ ಬಿಡುಗಡೆ*
ಮಹಾತ್ಮಗಾಂಧಿ ನರೇಗಾ ಯೋಜನೆಯ ಸಂಪೂರ್ಣ ಮಾಹಿತಿಯುಳ್ಳ ಕೈಪಿಡಿ ಹಾಗೂ ಭಿತ್ತಿ ಪತ್ರ ಅನಾವರಣ ಮಾಡಲಾಯಿತು.

*ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ*

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಶೇಕಡ 90 ಕ್ಕಿಂತ ಹೆಚ್ಚು ಅಂಕಗಳಿಸಿದ ಜಿಲ್ಲೆಯ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ ಸುಧಾಕರ್, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರಾದ ರಾಜಣ್ಣ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಯೋಜನಾ ಪ್ರಾಧಿಕಾರ(ಬಯಪ)ಅಧ್ಯಕ್ಷರಾದ ಶಾಂತಕುಮಾರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್ ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಕೆ ಬಾಬಾ ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

6 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

6 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

9 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

10 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

14 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

18 hours ago