ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120 ಎಕರೆ ಗೋಮಾಳ ಜಮೀನು ಇದೆ. ಅದರಲ್ಲಿ ಕೆಲವರಿಗೆ ಸರ್ಕಾರದಿಂದ ಗ್ರಾಂಟ್ ಆಗಿದೆ. ಮಿಕ್ಕುಳಿದ ಭೂಮಿಯನ್ನು ಭೂಕಳ್ಳರು ಕಬಳಿಸಿದ್ದಾರೆ. ಆದರೆ, ಎಲ್ಲೂ ಒಂದು ಅಡಿ ಜಾಗ ನಿರಾಶ್ರಿತರಿಗಾಗಿ ಮೀಸಲಿರಲಿಲ್ಲ. ಒಂದು ಊರಲ್ಲಿ ಬಿಟ್ಟರೆ ಬೇರೆ ಯಾವ ಊರಲ್ಲೂ ಸಹ ಸ್ಮಶಾನಕ್ಕೂ ಕೂಡ ಜಾಗ ಮೀಸಲಿಡಲಿಲ್ಲ. ಈ ಹಿನ್ನೆಲೆ 2022-23ನೇ ಸಾಲಿನಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಭೂಗಳ್ಳರು ಕಬಳಿಸಿದ್ದ ಭೂಮಿಯನ್ನು ಪತ್ತೆ ಮಾಡಿ ಆಶ್ರಯ ಯೋಜನೆಗಾಗಿ ಸುಮಾರು 8 ಎಕರೆ ಜಮೀನನ್ನು ಕಾನೂನು ಬದ್ಧವಾಗಿ ಮಂಜೂರು ಮಾಡಿಸಿಕೊಂಡಿದ್ದೇವೆ ಎಂದು ವಕೀಲ ಪ್ರತಾಪ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಸುಮಾರು 8 ಎಕರೆ ಜಮೀನು ಆಶ್ರಯ ಯೋಜನೆಗೆ ಮಂಜೂರು ಆಗಿರುವ ಹಿನ್ನೆಲೆ ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮವನ್ನು ಮಾಕಳಿ ದುರ್ಗ ರೈಲ್ವೆ‌ ನಿಲ್ದಾಣ ಸಮೀಪ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ 8 ಎಕರೆಗೆ ಪಹಣಿ, ಮ್ಯುಟೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಬಂದಿವೆ.

ಘಾಟಿ ಸುತ್ತಾಮುತ್ತಾ ಸರ್ಕಾರಿ ಜಮೀನುಗಳನ್ನು ಭೂಗಳ್ಳರು, ಬಲಾಡ್ಯರು ಕಬಳಿಕೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸರ್ಕಾರ ಈ ಕೂಡಲೇ ಪರಿಶೀಲನೆ ಮಾಡಿ, ಸರ್ಕಾರಿ ಜಮೀನುಗಳನ್ನು ಉಳಿಸಿ, ರೈತರು, ನಿರಾಶ್ರಿತರು, ಬಡವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸದ್ಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ 8 ಎಕರೆ ನಿವೇಶನಕ್ಕಾಗಿ ಮಂಜೂರಾಗಿರುವ ಜಾಗಕ್ಕೆ ಸುಮಾರು 500ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಪಂಚಾಯಿತಿ ವತಿಯಿಂದ ಈ ಎಲ್ಲಾ ಅರ್ಜಿಗಳು ಪರಿಶೀಲನೆ ಆಗುತ್ತವೆ. ನಿಜವಾದ ಫಲಾನುಭವಿಗಳಿಗೆ‌ ನಿವೇಶನ ದೊರಕುವ ನಂಬಿಕೆ‌ ಇದೆ ಎಂದರು.

ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ, ಮೇಲಿನ ಜುಗಾನಹಳ್ಳಿ (ಎಸ್. ಎಸ್. ಘಾಟಿ) ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತ ಹಳ್ಳಿಗಳಿಗೆ ಇದೊಂದು ಸುಸಂದರ್ಭ. ಏಕೆಂದರೆ ಕೆಲವು ಹಳ್ಳಿಗಳಿಗೆ ಆಶ್ರಯ ಯೋಜನೆಗೆ ಜಮೀನು ಸಿಕ್ಕಿರುವುದು ಒಳ್ಳೆಯ ಸಂಗತಿಯಾಗಿದೆ. ಏಕೆಂದರೆ ಬೆಂಗಳೂರಿನ ಭೂಕಳ್ಳರು ಬಂದು ಇಲ್ಲಿ ಜಮೀನನ್ನು ಕಳ್ಳತನ ಮಾಡುತ್ತಿದ್ದಾರೆ. ನಾವು ಎಚ್ಚೆತ್ತುಕೊಂಡರೆ ಮಾತ್ರ ನಮಗೆ ಜಮೀನು ಸಿಗುತ್ತದೆ. ಇಲ್ಲದಿದ್ದರೆ ಜಮೀನುಗಳು ಸಿಗುವುದಿಲ್ಲ ಎಂದು ಹೇಳಿದರು.

ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಸುರೇಶ್ ಕುಮಾರ್, ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ ಆರಾಧ್ಯ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅರ್ಚಕ ನಾಗರಾಜ್ ಸೇರಿದಂತೆ ಊರಿನ ಎಲ್ಲಾ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಹೃದಯವಿದ್ರಾವಕ ಘಟನೆ: ಒಂದೇ ದಿನ ಪತಿ-ಪತ್ನಿ ದಾರುಣ ಸಾವು

ಬೆಳಗಾವಿಯಲ್ಲಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಒಂದೇ ದಿನ ಪತಿ-ಪತ್ನಿ ದಾರುಣ ಸಾವನ್ನಪ್ಪಿದ್ದಾರೆ. ಅರವಳ್ಳಿ…

3 hours ago

ಮಾರಕಾಸ್ತ್ರಗಳಿಂದ ಶಿಕ್ಷಕಿಯ ಕ್ರೂರ ಹತ್ಯೆ: ಕೊಲೆ ಬಳಿಕ ದುಷ್ಕರ್ಮಿಗಳಿಂದ ಶವಕ್ಕೆ ಬೆಂಕಿ

ಕಲಬುರಗಿ ಜಿಲ್ಲೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕಿಯ ಮೇಲೆ ನಡೆದ ಕ್ರೂರ ಹತ್ಯೆ ಪ್ರಕರಣ ಎಲ್ಲರಲ್ಲೂ ಆತಂಕ ಮೂಡಿಸಿದೆ. ಕಮಲಾಪುರ ತಾಲೂಕಿನ…

4 hours ago

ಲಾಕಪ್ ಡೆತ್ ಮತ್ತು ಮರಣದಂಡನೆ….

ಸುಮಾರು ಆರು ವರ್ಷಗಳ ಹಿಂದೆ ಅಂದರೆ 2020ರಲ್ಲಿ ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ನಡೆದ ಅಮಾನುಷ ಲಾಕಪ್ ಡೆತ್ ಬಗ್ಗೆ ಬರೆದ…

6 hours ago

ತಂದೆ-ಮಗನ ಲಾಕಪ್ ಡೆತ್ ಕೇಸ್; ತಮಿಳುನಾಡಿನ 9 ಪೊಲೀಸರಿಗೆ ಗಲ್ಲು ಶಿಕ್ಷೆ

2020ರಲ್ಲಿ ತಮಿಳುನಾಡಿನಲ್ಲಿ ನಡೆದ ಸಾತಂಕುಲಂ ಕಸ್ಟಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮದ್ರಾಸ್ ಹೈಕೋರ್ಟ್‌ ಪೀಠವು 9 ಪೊಲೀಸ್ ಸಿಬ್ಬಂದಿಗೆ…

15 hours ago

ಇಂಧನ ತೈಲ ಮತ್ತು ಅನಿಲ ಪೂರೈಕೆ ಸಮಸ್ಯೆ – ರಾಜ್ಯದ ಜನತೆಗೆ ತೀವ್ರ ಸಂಕಷ್ಟ- ಸಚಿವ ಕೆ.ಎಚ್ ಮುನಿಯಪ್ಪ ಪ್ರತಿಕ್ರಿಯೆ

ರಾಜ್ಯದಲ್ಲಿ ಇಂಧನ ತೈಲ ಮತ್ತು ಅನಿಲ ಪೂರೈಕೆಯ ಸಮಸ್ಯೆ ಗಂಭೀರ ಸ್ವರೂಪ ಪಡೆದಿರುವ ಹಿನ್ನೆಲೆಯಲ್ಲಿ, ಆಹಾರ, ನಾಗರಿಕ ಸರಬರಾಜು ಮತ್ತು…

16 hours ago

ಆಟೋ ಎಲ್‌ಪಿಜಿಗಾಗಿ ಸಾಲುಗಟ್ಟಿ ನಿಂತ ನೂರಾರು ಆಟೋಗಳು

ಆಟೋ ಎಲ್‌ಪಿಜಿಗಾಗಿ ಡಿಕ್ರಾಸ್ ರಸ್ತೆಯ ಸೂಪರ್ ಗ್ಯಾಸ್ ಬಂಕ್ ಬಳಿ ನೂರಾರು ಆಟೋಗಳು ಸಾಲುಗಟ್ಟಿ ನಿಂತಿವೆ. ಆಟೋ ಎಲ್ಪಿಜಿ ಇಲ್ಲದೆ…

18 hours ago