ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120 ಎಕರೆ ಗೋಮಾಳ ಜಮೀನು ಇದೆ. ಅದರಲ್ಲಿ ಕೆಲವರಿಗೆ ಸರ್ಕಾರದಿಂದ ಗ್ರಾಂಟ್ ಆಗಿದೆ. ಮಿಕ್ಕುಳಿದ ಭೂಮಿಯನ್ನು ಭೂಕಳ್ಳರು ಕಬಳಿಸಿದ್ದಾರೆ. ಆದರೆ, ಎಲ್ಲೂ ಒಂದು ಅಡಿ ಜಾಗ ನಿರಾಶ್ರಿತರಿಗಾಗಿ ಮೀಸಲಿರಲಿಲ್ಲ. ಒಂದು ಊರಲ್ಲಿ ಬಿಟ್ಟರೆ ಬೇರೆ ಯಾವ ಊರಲ್ಲೂ ಸಹ ಸ್ಮಶಾನಕ್ಕೂ ಕೂಡ ಜಾಗ ಮೀಸಲಿಡಲಿಲ್ಲ. ಈ ಹಿನ್ನೆಲೆ 2022-23ನೇ ಸಾಲಿನಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಭೂಗಳ್ಳರು ಕಬಳಿಸಿದ್ದ ಭೂಮಿಯನ್ನು ಪತ್ತೆ ಮಾಡಿ ಆಶ್ರಯ ಯೋಜನೆಗಾಗಿ ಸುಮಾರು 8 ಎಕರೆ ಜಮೀನನ್ನು ಕಾನೂನು ಬದ್ಧವಾಗಿ ಮಂಜೂರು ಮಾಡಿಸಿಕೊಂಡಿದ್ದೇವೆ ಎಂದು ವಕೀಲ ಪ್ರತಾಪ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಸುಮಾರು 8 ಎಕರೆ ಜಮೀನು ಆಶ್ರಯ ಯೋಜನೆಗೆ ಮಂಜೂರು ಆಗಿರುವ ಹಿನ್ನೆಲೆ ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮವನ್ನು ಮಾಕಳಿ ದುರ್ಗ ರೈಲ್ವೆ‌ ನಿಲ್ದಾಣ ಸಮೀಪ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ 8 ಎಕರೆಗೆ ಪಹಣಿ, ಮ್ಯುಟೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಬಂದಿವೆ.

ಘಾಟಿ ಸುತ್ತಾಮುತ್ತಾ ಸರ್ಕಾರಿ ಜಮೀನುಗಳನ್ನು ಭೂಗಳ್ಳರು, ಬಲಾಡ್ಯರು ಕಬಳಿಕೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸರ್ಕಾರ ಈ ಕೂಡಲೇ ಪರಿಶೀಲನೆ ಮಾಡಿ, ಸರ್ಕಾರಿ ಜಮೀನುಗಳನ್ನು ಉಳಿಸಿ, ರೈತರು, ನಿರಾಶ್ರಿತರು, ಬಡವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸದ್ಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ 8 ಎಕರೆ ನಿವೇಶನಕ್ಕಾಗಿ ಮಂಜೂರಾಗಿರುವ ಜಾಗಕ್ಕೆ ಸುಮಾರು 500ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಪಂಚಾಯಿತಿ ವತಿಯಿಂದ ಈ ಎಲ್ಲಾ ಅರ್ಜಿಗಳು ಪರಿಶೀಲನೆ ಆಗುತ್ತವೆ. ನಿಜವಾದ ಫಲಾನುಭವಿಗಳಿಗೆ‌ ನಿವೇಶನ ದೊರಕುವ ನಂಬಿಕೆ‌ ಇದೆ ಎಂದರು.

ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ, ಮೇಲಿನ ಜುಗಾನಹಳ್ಳಿ (ಎಸ್. ಎಸ್. ಘಾಟಿ) ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತ ಹಳ್ಳಿಗಳಿಗೆ ಇದೊಂದು ಸುಸಂದರ್ಭ. ಏಕೆಂದರೆ ಕೆಲವು ಹಳ್ಳಿಗಳಿಗೆ ಆಶ್ರಯ ಯೋಜನೆಗೆ ಜಮೀನು ಸಿಕ್ಕಿರುವುದು ಒಳ್ಳೆಯ ಸಂಗತಿಯಾಗಿದೆ. ಏಕೆಂದರೆ ಬೆಂಗಳೂರಿನ ಭೂಕಳ್ಳರು ಬಂದು ಇಲ್ಲಿ ಜಮೀನನ್ನು ಕಳ್ಳತನ ಮಾಡುತ್ತಿದ್ದಾರೆ. ನಾವು ಎಚ್ಚೆತ್ತುಕೊಂಡರೆ ಮಾತ್ರ ನಮಗೆ ಜಮೀನು ಸಿಗುತ್ತದೆ. ಇಲ್ಲದಿದ್ದರೆ ಜಮೀನುಗಳು ಸಿಗುವುದಿಲ್ಲ ಎಂದು ಹೇಳಿದರು.

ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಸುರೇಶ್ ಕುಮಾರ್, ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ ಆರಾಧ್ಯ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅರ್ಚಕ ನಾಗರಾಜ್ ಸೇರಿದಂತೆ ಊರಿನ ಎಲ್ಲಾ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

8 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

11 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

11 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago