ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120 ಎಕರೆ ಗೋಮಾಳ ಜಮೀನು ಇದೆ. ಅದರಲ್ಲಿ ಕೆಲವರಿಗೆ ಸರ್ಕಾರದಿಂದ ಗ್ರಾಂಟ್ ಆಗಿದೆ. ಮಿಕ್ಕುಳಿದ ಭೂಮಿಯನ್ನು ಭೂಕಳ್ಳರು ಕಬಳಿಸಿದ್ದಾರೆ. ಆದರೆ, ಎಲ್ಲೂ ಒಂದು ಅಡಿ ಜಾಗ ನಿರಾಶ್ರಿತರಿಗಾಗಿ ಮೀಸಲಿರಲಿಲ್ಲ. ಒಂದು ಊರಲ್ಲಿ ಬಿಟ್ಟರೆ ಬೇರೆ ಯಾವ ಊರಲ್ಲೂ ಸಹ ಸ್ಮಶಾನಕ್ಕೂ ಕೂಡ ಜಾಗ ಮೀಸಲಿಡಲಿಲ್ಲ. ಈ ಹಿನ್ನೆಲೆ 2022-23ನೇ ಸಾಲಿನಲ್ಲಿ ಗ್ರಾಮಸ್ಥರೆಲ್ಲಾ ಸೇರಿ ಭೂಗಳ್ಳರು ಕಬಳಿಸಿದ್ದ ಭೂಮಿಯನ್ನು ಪತ್ತೆ ಮಾಡಿ ಆಶ್ರಯ ಯೋಜನೆಗಾಗಿ ಸುಮಾರು 8 ಎಕರೆ ಜಮೀನನ್ನು ಕಾನೂನು ಬದ್ಧವಾಗಿ ಮಂಜೂರು ಮಾಡಿಸಿಕೊಂಡಿದ್ದೇವೆ ಎಂದು ವಕೀಲ ಪ್ರತಾಪ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಸುಮಾರು 8 ಎಕರೆ ಜಮೀನು ಆಶ್ರಯ ಯೋಜನೆಗೆ ಮಂಜೂರು ಆಗಿರುವ ಹಿನ್ನೆಲೆ ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮವನ್ನು ಮಾಕಳಿ ದುರ್ಗ ರೈಲ್ವೆ‌ ನಿಲ್ದಾಣ ಸಮೀಪ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಈ 8 ಎಕರೆಗೆ ಪಹಣಿ, ಮ್ಯುಟೇಶನ್ ಸೇರಿದಂತೆ ಎಲ್ಲಾ ದಾಖಲೆಗಳು ಬಂದಿವೆ.

ಘಾಟಿ ಸುತ್ತಾಮುತ್ತಾ ಸರ್ಕಾರಿ ಜಮೀನುಗಳನ್ನು ಭೂಗಳ್ಳರು, ಬಲಾಡ್ಯರು ಕಬಳಿಕೆ ಮಾಡುತ್ತಿದ್ದಾರೆ. ಸ್ಥಳೀಯ ಗ್ರಾಮಸ್ಥರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸರ್ಕಾರ ಈ ಕೂಡಲೇ ಪರಿಶೀಲನೆ ಮಾಡಿ, ಸರ್ಕಾರಿ ಜಮೀನುಗಳನ್ನು ಉಳಿಸಿ, ರೈತರು, ನಿರಾಶ್ರಿತರು, ಬಡವರಿಗೆ ನೀಡಬೇಕು ಎಂದು ಒತ್ತಾಯಿಸಿದರು.

ಸದ್ಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ 8 ಎಕರೆ ನಿವೇಶನಕ್ಕಾಗಿ ಮಂಜೂರಾಗಿರುವ ಜಾಗಕ್ಕೆ ಸುಮಾರು 500ಕ್ಕೂ ಹೆಚ್ಚು ಅರ್ಜಿಗಳು ಬಂದಿವೆ. ಪಂಚಾಯಿತಿ ವತಿಯಿಂದ ಈ ಎಲ್ಲಾ ಅರ್ಜಿಗಳು ಪರಿಶೀಲನೆ ಆಗುತ್ತವೆ. ನಿಜವಾದ ಫಲಾನುಭವಿಗಳಿಗೆ‌ ನಿವೇಶನ ದೊರಕುವ ನಂಬಿಕೆ‌ ಇದೆ ಎಂದರು.

ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯ ಕೃಷ್ಣಪ್ಪ (ಕಿಟ್ಟಿ) ಮಾತನಾಡಿ, ಮೇಲಿನ ಜುಗಾನಹಳ್ಳಿ (ಎಸ್. ಎಸ್. ಘಾಟಿ) ಪಂಚಾಯತಿ ವ್ಯಾಪ್ತಿಯ ಸುತ್ತಮುತ್ತ ಹಳ್ಳಿಗಳಿಗೆ ಇದೊಂದು ಸುಸಂದರ್ಭ. ಏಕೆಂದರೆ ಕೆಲವು ಹಳ್ಳಿಗಳಿಗೆ ಆಶ್ರಯ ಯೋಜನೆಗೆ ಜಮೀನು ಸಿಕ್ಕಿರುವುದು ಒಳ್ಳೆಯ ಸಂಗತಿಯಾಗಿದೆ. ಏಕೆಂದರೆ ಬೆಂಗಳೂರಿನ ಭೂಕಳ್ಳರು ಬಂದು ಇಲ್ಲಿ ಜಮೀನನ್ನು ಕಳ್ಳತನ ಮಾಡುತ್ತಿದ್ದಾರೆ. ನಾವು ಎಚ್ಚೆತ್ತುಕೊಂಡರೆ ಮಾತ್ರ ನಮಗೆ ಜಮೀನು ಸಿಗುತ್ತದೆ. ಇಲ್ಲದಿದ್ದರೆ ಜಮೀನುಗಳು ಸಿಗುವುದಿಲ್ಲ ಎಂದು ಹೇಳಿದರು.

ತೂಬಗೆರೆ ಗ್ರಾಮ ಪಂಚಾಯಿತಿ ಸದಸ್ಯರುಗಳು ಸುರೇಶ್ ಕುಮಾರ್, ಮುನಿಕೃಷ್ಣಪ್ಪ, ತೂಬಗೆರೆ ಹೋಬಳಿ ಬಿಜೆಪಿ ಅಧ್ಯಕ್ಷ ವಾಸುದೇವ್, ಜೆಡಿಎಸ್ ಮುಖಂಡ ಉದಯ ಆರಾಧ್ಯ, ಘಾಟಿ ಸುಬ್ರಹ್ಮಣ್ಯ ದೇವಾಲಯ ಅರ್ಚಕ ನಾಗರಾಜ್ ಸೇರಿದಂತೆ ಊರಿನ ಎಲ್ಲಾ ಗ್ರಾಮಸ್ಥರು ಹಾಜರಿದ್ದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

1 hour ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

2 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

9 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago