ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.93 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.06 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಖರಾಬು, ಸ್ಮಶಾನ, ಸರ್ಕಾರಿ ಓಣೆ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
*ಆನೇಕಲ್ ತಾಲ್ಲೂಕಿನ* ಅತ್ತಿಬೆಲೆ ಹೋಬಳಿಯ ಭಕ್ತಿಪುರ ಗ್ರಾಮದ ಸ.ನಂ. 38 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.35 ಲಕ್ಷಗಳಾಗಿರುತ್ತದೆ.
*ಬೆಂಗಳೂರು ದಕ್ಷಿಣ ತಾಲ್ಲೂಕಿನ* ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸ.ನಂ 141 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.11 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.65 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಂಬೀಪುರ ಗ್ರಾಮದ ಸ.ನಂ 173 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 3.50 ಕೋಟಿಗಳಾಗಿರುತ್ತದೆ
*ಬೆಂಗಳೂರು ಉತ್ತರ ತಾಲ್ಲೂಕಿನ* ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ.
*ಯಲಹಂಕ ತಾಲ್ಲೂಕಿನ* ಯಲಹಂಕ ಹೋಬಳಿಯ ಶಿವನಹಳ್ಳಿ ಗ್ರಾಮದ ಸ.ನಂ 48 ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.13 ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಗಡೇನಹಳ್ಳಿ ಗ್ರಾಮದ ಸ.ನಂ 22 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಲಕ್ಷಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು ಹಾಗೂ ವಿವಿ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.
ಭಾರತ ರತ್ನ ಡಾ. ಸರ್ ಎಂ. ವಿಶ್ವೇಶ್ವರಯ್ಯನವರ 165ನೇ ಜಯಂತಿ ಅಂಗವಾಗಿ ಮೈಸೂರಿನ ಭಾರತೀಯ ಎಂಜಿನಿಯರ್ಗಳ ಸಂಸ್ಥೆ ವತಿಯಿಂದ ಸಂಸ್ಥೆಯ…
ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…
ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…
ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…
ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…
ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…