8.93 ಕೋಟಿ ಮೌಲ್ಯದ ಅಕ್ರಮ ಒತ್ತುವರಿ ತೆರವು : ಜಿಲ್ಲಾಧಿಕಾರಿ ಜಿ.ಜಗದೀಶ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.93 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.06 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.

ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಖರಾಬು, ಸ್ಮಶಾನ, ಸರ್ಕಾರಿ ಓಣೆ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.

*ಆನೇಕಲ್ ತಾಲ್ಲೂಕಿನ* ಅತ್ತಿಬೆಲೆ ಹೋಬಳಿಯ ಭಕ್ತಿಪುರ ಗ್ರಾಮದ ಸ.ನಂ. 38 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.35 ಲಕ್ಷಗಳಾಗಿರುತ್ತದೆ.

*ಬೆಂಗಳೂರು ದಕ್ಷಿಣ ತಾಲ್ಲೂಕಿನ* ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸ.ನಂ 141 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.11 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.65 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಂಬೀಪುರ ಗ್ರಾಮದ ಸ.ನಂ 173 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 3.50 ಕೋಟಿಗಳಾಗಿರುತ್ತದೆ

*ಬೆಂಗಳೂರು ಉತ್ತರ ತಾಲ್ಲೂಕಿನ* ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ.

*ಯಲಹಂಕ ತಾಲ್ಲೂಕಿನ* ಯಲಹಂಕ ಹೋಬಳಿಯ ಶಿವನಹಳ್ಳಿ ಗ್ರಾಮದ ಸ.ನಂ 48 ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.13 ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಗಡೇನಹಳ್ಳಿ ಗ್ರಾಮದ ಸ.ನಂ 22 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಲಕ್ಷಗಳಾಗಿರುತ್ತದೆ.

ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು ಹಾಗೂ ವಿವಿ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

22 hours ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

1 day ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

1 day ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

1 day ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

2 days ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

2 days ago