ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 8.93 ಕೋಟಿ ಅಂದಾಜು ಮೌಲ್ಯದ ಒಟ್ಟು 2 ಎಕರೆ 0.06 ಗುಂಟೆ ಸರ್ಕಾರಿ ಜಮೀನನ್ನು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ.ಜಗದೀಶ ಅವರ ನೇತೃತ್ವದಲ್ಲಿ ತೆರವುಗೊಳಿಸಿ ಸರ್ಕಾರದ ವಶಕ್ಕೆ ಪಡೆಯಲಾಯಿತು.
ಇಂದು ಬೆಂಗಳೂರು ನಗರ ಜಿಲ್ಲೆಯಾದ್ಯಂತ ವಿವಿಧ ತಾಲ್ಲೂಕುಗಳ ತಹಶೀಲ್ದಾರ್ ಗಳು ತಮ್ಮ ವ್ಯಾಪ್ತಿಯಲ್ಲಿ ಅಕ್ರಮವಾಗಿ ಒತ್ತುವರಿಯಾಗಿದ್ದ ಗೋಮಾಳ, ಖರಾಬು, ಸ್ಮಶಾನ, ಸರ್ಕಾರಿ ಓಣೆ ಮತ್ತು ಕೆರೆ ಜಾಗಗಳಿಗೆ ಭೇಟಿ ನೀಡಿ ತೆರವು ಕಾರ್ಯಾಚರಣೆ ಕೈಗೊಂಡರು.
*ಆನೇಕಲ್ ತಾಲ್ಲೂಕಿನ* ಅತ್ತಿಬೆಲೆ ಹೋಬಳಿಯ ಭಕ್ತಿಪುರ ಗ್ರಾಮದ ಸ.ನಂ. 38 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.05 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ 0.35 ಲಕ್ಷಗಳಾಗಿರುತ್ತದೆ.
*ಬೆಂಗಳೂರು ದಕ್ಷಿಣ ತಾಲ್ಲೂಕಿನ* ತಾವರೆಕೆರೆ ಹೋಬಳಿಯ ಕುರುಬರಹಳ್ಳಿ ಗ್ರಾಮದ ಸ.ನಂ 141 ರ ಖರಾಬು ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.11 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.65 ಲಕ್ಷಗಳಾಗಿರುತ್ತದೆ. ಕೆಂಗೇರಿ ಹೋಬಳಿಯ ಕಂಬೀಪುರ ಗ್ರಾಮದ ಸ.ನಂ 173 ರ ಸ್ಮಶಾನ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.27 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 3.50 ಕೋಟಿಗಳಾಗಿರುತ್ತದೆ
*ಬೆಂಗಳೂರು ಉತ್ತರ ತಾಲ್ಲೂಕಿನ* ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ಕಾರಿ ಓಣಿ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.20 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 2.50 ಕೋಟಿಗಳಾಗಿರುತ್ತದೆ.
*ಯಲಹಂಕ ತಾಲ್ಲೂಕಿನ* ಯಲಹಂಕ ಹೋಬಳಿಯ ಶಿವನಹಳ್ಳಿ ಗ್ರಾಮದ ಸ.ನಂ 48 ರ ಕೆರೆ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.03 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 1.13 ಕೋಟಿಗಳಾಗಿರುತ್ತದೆ. ಜಾಲ ಹೋಬಳಿಯ ಗಡೇನಹಳ್ಳಿ ಗ್ರಾಮದ ಸ.ನಂ 22 ರ ಗೋಮಾಳ ಒಟ್ಟು ಒತ್ತುವರಿ ತೆರವುಗೊಳಿಸಿರುವ ವಿಸ್ತೀರ್ಣ 0.19 ಗುಂಟೆಗಳಾಗಿದ್ದು, ಅಂದಾಜು ಮೌಲ್ಯ ರೂ 0.80 ಲಕ್ಷಗಳಾಗಿರುತ್ತದೆ.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಯಾದ ಜಗದೀಶ್ ಕೆ ನಾಯಕ್, ಜಿಲ್ಲಾಧಿಕಾರಿಗಳ ಕಚೇರಿಯ ಕಚೇರಿ ಸಹಾಯಕರು ಹಾಗೂ ವಿವಿ ತಾಲ್ಲೂಕಿನ ತಹಶೀಲ್ದಾರ್ ರವರು ಉಪಸ್ಥಿತರಿದ್ದರು.
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…
ದೇಶಭಕ್ತಿ ಮತ್ತು ದೇಶದ್ರೋಹ...... ಇದು ಬ್ರಿಟಿಷರ ಕಾಲದ್ದೇ ಅಥವಾ ಈ ಕಾಲಕ್ಕೂ ಅನ್ವಯಿಸುತ್ತದೆಯೇ..... ರಾಷ್ಟ್ರೀಯತೆ ಎಂಬ ಪರಿಕಲ್ಪನೆಯ ಸುತ್ತಾ....... ರಾಷ್ಟ್ರ…
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…