800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆದು ಪುನೀತರಾದರು….

ತಿಮ್ಮರಾಯಸ್ವಾಮಿ ದೇವಾಲಯ ಹಿನ್ನೆಲೆ

ಈ ಹಿಂದೆ ತಿರುಪತಿಗೆ ಹೋಗಿ ದೇವರ ದರ್ಶನ ಪಡೆಯಲು ಕಷ್ಟವಾಗುತ್ತಿತ್ತು. ಆದ್ದರಿಂದ ಸಪ್ತ ಋಷಿಗಳಲ್ಲಿ ಒಬ್ಬರಾದ ಗೌತಮ ಋಷಿಗಳು ಆವತಿಯಲ್ಲಿ ತಿಮ್ಮರಾಯಸ್ವಾಮಿ ದೇವಾಲಯವನ್ನು ಕಟ್ಟುತ್ತಾರೆ ಎಂದು ದೇವಾಲಯ ಪ್ರಧಾನ ಅರ್ಚಕ ಶ್ರೀಧರ್ ಭಟ್ ಹೇಳಿದರು.

ದೇವಾಲಯ ಹಿಂಭಾಗ ಗವಿ ಇದೆ. ಅಲ್ಲಿ ಋಷಿಗಳು ತಪಸ್ಸು ಮಾಡುತ್ತಿದ್ದರು. ಈ ದೇವಸ್ಥಾನದಲ್ಲಿ ಭಕ್ತರು ಏನೇ ಹರಕೆ ಹೊತ್ತುಕೊಂಡರೆ ಅದು ನೆರವೇರುತ್ತದೆ ಎಂದರು.

ಮಾಘ ಮಾಸ, ವೈಕುಂಠ ಏಕಾದಶಿ, ಶ್ರಾವಣ ಮಾಸದಲ್ಲಿ ಇಲ್ಲಿ ವಿಶೇಷವಾಗಿರುತ್ತದೆ. ಅಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಾರೆ… ನಿತ್ಯ ಅನ್ನದಾನ ನಡೆಯುತ್ತದೆ ಎಂದು ತಿಳಿಸಿದರು…

ಆಂಧ್ರ, ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ ಎಂದರು…

ಆವತಿ ಹೆಸರಿನ ಹಿನ್ನೆಲೆ

ನಾಡಪ್ರಭು ಕೆಂಪೇಗೌಡರು ಇಲ್ಲೇ ಹುಟ್ಟಿದ್ದು ಎಂದು ಹೇಳಲಾಗುತ್ತದೆ. ಕೆಂಪೇಗೌಡರ ತಂದೆ ತಾಯಿ ಇಲ್ಲಿ ತೋಟ ಒಂದರಲ್ಲಿ ಕೆಲಸ ಮಾಡುತ್ತಿದ್ದರಂತೆ.‌ ಆಗ ಕೆಂಪೇಗೌಡರು ಇನ್ನು ಚಿಕ್ಕ ಮಗು, ಹತ್ತಿ‌ ಮರಕ್ಕೆ ಜೋಳಿಗೆ ಕಟ್ಟಿ ಜೋಳಿಗೆಯಲ್ಲಿ ಮಲಗಿಸಿ ತೋಟದಲ್ಲಿ ಕೆಲಸ ಮಾಡುತ್ತಿದ್ದರಂತೆ. ಬೇಸಿಗೆ ಕಾಲದಲ್ಲಿ ಹತ್ತಿ ಮರದ‌ ಕೆಳಗಡೆ ಕೆಂಪೇಗೌಡರು ಜೋಳಿಗೆಯಲ್ಲಿ ಮಲಗಿರಬೇಕಾದರೆ ನೆರಳು ಕೊಡಲೆಂದು ಪ್ರತಿದಿನ ಹಾವು ಹತ್ತಿ ಮರ ಹತ್ತುತ್ತಿತ್ತಂತೆ. ಆಗ ಜನ ಇದನ್ನು ಕಂಡು ಹಾವು ಹತ್ತಿ… ಹಾವು ಹತ್ತಿ ಎಂದು ಹೇಳುತ್ತಾ ಹೇಳುತ್ತಾ ಇಂದು ಆವತಿ‌ಯಾಗಿದೆ ಎಂದು ಹೇಳಲಾಗುತ್ತದೆ ಎಂದು ದೇವಾಲಯ ಪ್ರಧಾನ ಅರ್ಚಕ ಶ್ರೀಧರ್ ಭಟ್ ಹೇಳಿದ್ದಾರೆ….

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

5 hours ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

17 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

17 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

18 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

21 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago