800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆದು ಪುನೀತರಾದರು….

ತಿಮ್ಮರಾಯಸ್ವಾಮಿ ದೇವಾಲಯ ಹಿನ್ನೆಲೆ

ಈ ಹಿಂದೆ ತಿರುಪತಿಗೆ ಹೋಗಿ ದೇವರ ದರ್ಶನ ಪಡೆಯಲು ಕಷ್ಟವಾಗುತ್ತಿತ್ತು. ಆದ್ದರಿಂದ ಸಪ್ತ ಋಷಿಗಳಲ್ಲಿ ಒಬ್ಬರಾದ ಗೌತಮ ಋಷಿಗಳು ಆವತಿಯಲ್ಲಿ ತಿಮ್ಮರಾಯಸ್ವಾಮಿ ದೇವಾಲಯವನ್ನು ಕಟ್ಟುತ್ತಾರೆ ಎಂದು ದೇವಾಲಯ ಪ್ರಧಾನ ಅರ್ಚಕ ಶ್ರೀಧರ್ ಭಟ್ ಹೇಳಿದರು.

ದೇವಾಲಯ ಹಿಂಭಾಗ ಗವಿ ಇದೆ. ಅಲ್ಲಿ ಋಷಿಗಳು ತಪಸ್ಸು ಮಾಡುತ್ತಿದ್ದರು. ಈ ದೇವಸ್ಥಾನದಲ್ಲಿ ಭಕ್ತರು ಏನೇ ಹರಕೆ ಹೊತ್ತುಕೊಂಡರೆ ಅದು ನೆರವೇರುತ್ತದೆ ಎಂದರು.

ಮಾಘ ಮಾಸ, ವೈಕುಂಠ ಏಕಾದಶಿ, ಶ್ರಾವಣ ಮಾಸದಲ್ಲಿ ಇಲ್ಲಿ ವಿಶೇಷವಾಗಿರುತ್ತದೆ. ಅಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಾರೆ… ನಿತ್ಯ ಅನ್ನದಾನ ನಡೆಯುತ್ತದೆ ಎಂದು ತಿಳಿಸಿದರು…

ಆಂಧ್ರ, ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ ಎಂದರು…

ಆವತಿ ಹೆಸರಿನ ಹಿನ್ನೆಲೆ

ನಾಡಪ್ರಭು ಕೆಂಪೇಗೌಡರು ಇಲ್ಲೇ ಹುಟ್ಟಿದ್ದು ಎಂದು ಹೇಳಲಾಗುತ್ತದೆ. ಕೆಂಪೇಗೌಡರ ತಂದೆ ತಾಯಿ ಇಲ್ಲಿ ತೋಟ ಒಂದರಲ್ಲಿ ಕೆಲಸ ಮಾಡುತ್ತಿದ್ದರಂತೆ.‌ ಆಗ ಕೆಂಪೇಗೌಡರು ಇನ್ನು ಚಿಕ್ಕ ಮಗು, ಹತ್ತಿ‌ ಮರಕ್ಕೆ ಜೋಳಿಗೆ ಕಟ್ಟಿ ಜೋಳಿಗೆಯಲ್ಲಿ ಮಲಗಿಸಿ ತೋಟದಲ್ಲಿ ಕೆಲಸ ಮಾಡುತ್ತಿದ್ದರಂತೆ. ಬೇಸಿಗೆ ಕಾಲದಲ್ಲಿ ಹತ್ತಿ ಮರದ‌ ಕೆಳಗಡೆ ಕೆಂಪೇಗೌಡರು ಜೋಳಿಗೆಯಲ್ಲಿ ಮಲಗಿರಬೇಕಾದರೆ ನೆರಳು ಕೊಡಲೆಂದು ಪ್ರತಿದಿನ ಹಾವು ಹತ್ತಿ ಮರ ಹತ್ತುತ್ತಿತ್ತಂತೆ. ಆಗ ಜನ ಇದನ್ನು ಕಂಡು ಹಾವು ಹತ್ತಿ… ಹಾವು ಹತ್ತಿ ಎಂದು ಹೇಳುತ್ತಾ ಹೇಳುತ್ತಾ ಇಂದು ಆವತಿ‌ಯಾಗಿದೆ ಎಂದು ಹೇಳಲಾಗುತ್ತದೆ ಎಂದು ದೇವಾಲಯ ಪ್ರಧಾನ ಅರ್ಚಕ ಶ್ರೀಧರ್ ಭಟ್ ಹೇಳಿದ್ದಾರೆ….

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

14 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

22 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

22 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

2 days ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

2 days ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago