800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರ ದಂಡು

ಇಂದು ಹೊಸ ವರ್ಷ ಹಿನ್ನೆಲೆ 800 ವರ್ಷಗಳ ಇತಿಹಾಸಯುಳ್ಳ ಆವತಿ ತಿಮ್ಮರಾಯಸ್ವಾಮಿ ಬೆಟ್ಟದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆದು ಪುನೀತರಾದರು….

ತಿಮ್ಮರಾಯಸ್ವಾಮಿ ದೇವಾಲಯ ಹಿನ್ನೆಲೆ

ಈ ಹಿಂದೆ ತಿರುಪತಿಗೆ ಹೋಗಿ ದೇವರ ದರ್ಶನ ಪಡೆಯಲು ಕಷ್ಟವಾಗುತ್ತಿತ್ತು. ಆದ್ದರಿಂದ ಸಪ್ತ ಋಷಿಗಳಲ್ಲಿ ಒಬ್ಬರಾದ ಗೌತಮ ಋಷಿಗಳು ಆವತಿಯಲ್ಲಿ ತಿಮ್ಮರಾಯಸ್ವಾಮಿ ದೇವಾಲಯವನ್ನು ಕಟ್ಟುತ್ತಾರೆ ಎಂದು ದೇವಾಲಯ ಪ್ರಧಾನ ಅರ್ಚಕ ಶ್ರೀಧರ್ ಭಟ್ ಹೇಳಿದರು.

ದೇವಾಲಯ ಹಿಂಭಾಗ ಗವಿ ಇದೆ. ಅಲ್ಲಿ ಋಷಿಗಳು ತಪಸ್ಸು ಮಾಡುತ್ತಿದ್ದರು. ಈ ದೇವಸ್ಥಾನದಲ್ಲಿ ಭಕ್ತರು ಏನೇ ಹರಕೆ ಹೊತ್ತುಕೊಂಡರೆ ಅದು ನೆರವೇರುತ್ತದೆ ಎಂದರು.

ಮಾಘ ಮಾಸ, ವೈಕುಂಠ ಏಕಾದಶಿ, ಶ್ರಾವಣ ಮಾಸದಲ್ಲಿ ಇಲ್ಲಿ ವಿಶೇಷವಾಗಿರುತ್ತದೆ. ಅಂದು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ದರ್ಶನ ಪಡೆಯುತ್ತಾರೆ… ನಿತ್ಯ ಅನ್ನದಾನ ನಡೆಯುತ್ತದೆ ಎಂದು ತಿಳಿಸಿದರು…

ಆಂಧ್ರ, ತಮಿಳುನಾಡು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಿಂದ ಭಕ್ತರು ಇಲ್ಲಿಗೆ ಆಗಮಿಸುತ್ತಾರೆ ಎಂದರು…

ಆವತಿ ಹೆಸರಿನ ಹಿನ್ನೆಲೆ

ನಾಡಪ್ರಭು ಕೆಂಪೇಗೌಡರು ಇಲ್ಲೇ ಹುಟ್ಟಿದ್ದು ಎಂದು ಹೇಳಲಾಗುತ್ತದೆ. ಕೆಂಪೇಗೌಡರ ತಂದೆ ತಾಯಿ ಇಲ್ಲಿ ತೋಟ ಒಂದರಲ್ಲಿ ಕೆಲಸ ಮಾಡುತ್ತಿದ್ದರಂತೆ.‌ ಆಗ ಕೆಂಪೇಗೌಡರು ಇನ್ನು ಚಿಕ್ಕ ಮಗು, ಹತ್ತಿ‌ ಮರಕ್ಕೆ ಜೋಳಿಗೆ ಕಟ್ಟಿ ಜೋಳಿಗೆಯಲ್ಲಿ ಮಲಗಿಸಿ ತೋಟದಲ್ಲಿ ಕೆಲಸ ಮಾಡುತ್ತಿದ್ದರಂತೆ. ಬೇಸಿಗೆ ಕಾಲದಲ್ಲಿ ಹತ್ತಿ ಮರದ‌ ಕೆಳಗಡೆ ಕೆಂಪೇಗೌಡರು ಜೋಳಿಗೆಯಲ್ಲಿ ಮಲಗಿರಬೇಕಾದರೆ ನೆರಳು ಕೊಡಲೆಂದು ಪ್ರತಿದಿನ ಹಾವು ಹತ್ತಿ ಮರ ಹತ್ತುತ್ತಿತ್ತಂತೆ. ಆಗ ಜನ ಇದನ್ನು ಕಂಡು ಹಾವು ಹತ್ತಿ… ಹಾವು ಹತ್ತಿ ಎಂದು ಹೇಳುತ್ತಾ ಹೇಳುತ್ತಾ ಇಂದು ಆವತಿ‌ಯಾಗಿದೆ ಎಂದು ಹೇಳಲಾಗುತ್ತದೆ ಎಂದು ದೇವಾಲಯ ಪ್ರಧಾನ ಅರ್ಚಕ ಶ್ರೀಧರ್ ಭಟ್ ಹೇಳಿದ್ದಾರೆ….

Ramesh Babu

Journalist

Recent Posts

ಸರ್ಕಾರಗಳ ಸಾಧನೋತ್ಸವ…….

ಸರ್ಕಾರಗಳ ಸಾಧನೋತ್ಸವ....... ಕರ್ನಾಟಕದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ 8ನೇ ವರ್ಷದ ( 5+3 ) ಸಾಧನಾ ಉತ್ಸವ, ಭಾರತದ…

6 hours ago

ತಿಪ್ಪೂರು ವಿಎಸ್ ಎಸ್ ಎನ್ ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ದೊಡ್ಡಬಳ್ಳಾಪುರ ತಾಲೂಕಿನ ತಿಪ್ಪೂರು ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ ನೂತನ ಅಧ್ಯಕ್ಷರಾಗಿ…

17 hours ago

ಹಕ್ಕಿಜ್ವರ ಶಂಕೆ: ನವಿಲುಗಳ ಮಾರಣ ಹೋಮ…

ನೆಲಮಂಗಲ: ನೆಲಮಂಗಲದಲ್ಲಿ ನವಿಲುಗಳ ಸಾಮೂಹಿಕ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಹಕ್ಕಿಜ್ವರ (Bird Flu)ಶಂಕೆಯಿಂದ ಸುಮಾರು 10-15 ನವಿಲುಗಳು ಸಾವನ್ನಪ್ಪಿದ…

18 hours ago

ಮೇ.21ಕ್ಕೆ ಭೂಸ್ವಾಧೀನ ವಿರೋಧಿಸಿ ಡಿಸಿ ಕಚೇರಿಗೆ ಟ್ರ್ಯಾಕರ್ ಮೆರವಣಿಗೆ

ದೊಡ್ಡಬೆಳವಂಗಲ ಹೋಬಳಿಯ 2100 ಎಕರೆಯ ಭೂಸ್ವಾಧೀನ ವಿರೋಧಿಸಿ ಜಿಲ್ಲಾಧಿಕಾರಿ ಕಚೇರಿಗೆ ದೊಡ್ಡಬೆಳವಂಗಲ,‌ ಚಿಕ್ಕಬೆಳವಂಗಲ, ಸೊಣ್ಣೇನಹಳ್ಳಿ, ರಾಂಪುರ, ನಾರನಹಳ್ಳಿ ಗ್ರಾಮಗಳ ರೈತರಿಂದ…

19 hours ago

ಸ್ನೇಹಿತನ ಬರ್ತಡೇ ಪಾರ್ಟಿಗೆ ಬಂದಿದ್ದ ಯುವಕ ಈಜುಕೊಳಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಸ್ನೇಹಿತನ ಬರ್ತಡೇ ಪಾರ್ಟಿಗೆಂದು ಖಾಸಗಿ ರೆಸಾರ್ಟ್‌ಗೆ ಬಂದಿದ್ದ ಯುವಕನೊಬ್ಬ ನಿದ್ದೆಗಣ್ಣಿನಲ್ಲಿ ಈಜುಕೊಳಕ್ಕೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬಳ್ಳಾಪುರ ತಾಲೂಕಿನ…

20 hours ago

ದಶಕಗಳುರುಳಿದರೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಿಲ್ಲ ಜಿಲ್ಲಾ ಕೇಂದ್ರ

ರಾಜ್ಯ ರಾಜಧಾನಿ ಬೆಂಗಳೂರಿಗೆ ಪಕ್ಕದಲ್ಲೇ ಇರುವ ಜಿಲ್ಲೆ ಎಂದರೆ ಅದು ಬೆಂಗಳೂರು ಗ್ರಾಮಾಂತರ ಜಿಲ್ಲೆ. ಕೈಗಾರಿಕಾ ಬೆಳವಣಿಗೆ, ವೇಗವಾದ ನಗರೀಕರಣ,…

1 day ago