ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್ ಫಣೀಂದ್ರ ಅವರು ಹೇಳಿದರು.
ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ನಾಲ್ಕುದಿನದ ಪ್ರವಾಸದ ಮೊದಲ ದಿನದ ಶನಿವಾರದಂದು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 81 ದೂರುಗಳು ಸಲ್ಲಿಕೆಯಾಗಿವೆ. ಅದರಲ್ಲಿ 03 ವಿವಿಧ ಪ್ರಕರಣಗಳು ಎಂದು ಗುರ್ತಿಸಲಾಗಿದೆ. 23 ಪ್ರಕರಣಗಳು ಕಾನೂನು ಸಲಹೆ, ಮೇಲ್ಮನವಿ, ಪೊಲೀಸ್ ತನಿಖೆ ಎಂದು ವಿಭಜಿಸಲಾಗಿ ಆಯಾ ವ್ಯಾಪ್ತಿಗೆ ಪ್ರಕರಣ ಹಸ್ತಾಂತರಿಸಲಾಗುವುದು ಎಂದರು.
ಸೋಮವಾರದಂದು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಪೈಕಿ 74 ಪ್ರಕರಣ ವಿಚಾರಣೆ ನಡೆಸಿ 55 ಪ್ರಕರಣ ಇತ್ಯರ್ಥ ಪಡಿಸಲಾಯಿತು. ಮಂಗಳವಾರದಂದು 42 ಪ್ರಕರಣಗಳ ವಿಚಾರಣೆ ನಡೆಸಿ 33 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಒಟ್ಟು 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿ, ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ, ಪೌತಿ ಖಾತೆ, ಖಾತೆ ಬದಲಾವಣೆ, ಲಂಚಕ್ಕೆ ಬೇಡಿಕೆ, ಸರ್ಕಾರಿ ಆದೇಶಗಳನ್ನು ನೀಡಲು ವಿಳಂಬ, ಜಮೀನು ಸರ್ವೇ ಕಾರ್ಯ, ನಿವೃತ್ತ ಸರ್ಕಾರಿ ನೌಕರರ ಪಿಂಚಣಿ, ಕ್ರಯ ಪತ್ರ, ನೀರಿನ ಸಮಸ್ಯೆ, ಗಡಿ ಗುರುತಿಸುವಿಕೆ ಮುಂತಾದ ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ.
ಸಾರ್ವಜನಿಕರು ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಉಚಿತ ಕಾನೂನು ಸಲಹೆಗಾಗಿ ಜಿಲ್ಲಾ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.
ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ದೂರು ನೀಡಲು ಬಂದಾಗ ಗೌರವದಿಂದ ನಡೆಸಿಕೊಳ್ಳುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆ ಮೇಲಿನ ನಂಬಿಕೆಯನ್ನು ಕಾಪಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಸಾರ್ವಜನಿಕ ಸಮಸ್ಯೆಗಳಿಗೆ ಯಾವುದೇ ನಿರೀಕ್ಷೆಗಳಿಲ್ಲದೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಕೆಲವು ಬಾರಿ ದೂರುದಾರರು ಹಾಗೂ ಎದುರುದಾರರು ಇಬ್ಬರಲ್ಲೂ ತಪ್ಪು ಕಂಡುಬರಬಹುದು. ಮುಂದೆ ತಪ್ಪುಗಳನ್ನು ಮಾಡದಂತೆ ಎಚ್ಚರವಹಿಸಬೇಕು ಎಂದು ಸರ್ಕಾರಿ ನೌಕರರಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.
ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ ಚನ್ನಕೇಶವ ರೆಡ್ಡಿ, ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.
ದಲಿತರು, ದಲಿತ ಕಾಲೋನಿಗಳೆಂದರೆ ಅಧಿಕಾರಿಗಳಿಗೆ, ಜನಪ್ರತಿನಿಧಿಗಳಿಗೆ ಏಕಿಷ್ಟು ನಿರ್ಲಕ್ಷ್ಯ, ಬೇಜವಾಬ್ದಾರಿ, ಅಸಡ್ಡೆ. ದಲಿತ ಕಾಲೋನಿಗೆ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಹಾಡೋನಹಳ್ಳಿ…
ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…
ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…
ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್…
18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…
ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…