88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ- ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ

ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್ ಫಣೀಂದ್ರ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ನಾಲ್ಕುದಿನದ ಪ್ರವಾಸದ ಮೊದಲ ದಿನದ ಶನಿವಾರದಂದು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 81 ದೂರುಗಳು ಸಲ್ಲಿಕೆಯಾಗಿವೆ. ಅದರಲ್ಲಿ 03 ವಿವಿಧ ಪ್ರಕರಣಗಳು ಎಂದು ಗುರ್ತಿಸಲಾಗಿದೆ. 23 ಪ್ರಕರಣಗಳು ಕಾನೂನು ಸಲಹೆ, ಮೇಲ್ಮನವಿ, ಪೊಲೀಸ್ ತನಿಖೆ ಎಂದು ವಿಭಜಿಸಲಾಗಿ ಆಯಾ ವ್ಯಾಪ್ತಿಗೆ ಪ್ರಕರಣ ಹಸ್ತಾಂತರಿಸಲಾಗುವುದು ಎಂದರು.

ಸೋಮವಾರದಂದು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಪೈಕಿ 74 ಪ್ರಕರಣ ವಿಚಾರಣೆ ನಡೆಸಿ 55 ಪ್ರಕರಣ ಇತ್ಯರ್ಥ ಪಡಿಸಲಾಯಿತು. ಮಂಗಳವಾರದಂದು 42 ಪ್ರಕರಣಗಳ ವಿಚಾರಣೆ ನಡೆಸಿ 33 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಒಟ್ಟು 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿ, ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ, ಪೌತಿ ಖಾತೆ, ಖಾತೆ ಬದಲಾವಣೆ, ಲಂಚಕ್ಕೆ ಬೇಡಿಕೆ, ಸರ್ಕಾರಿ ಆದೇಶಗಳನ್ನು ನೀಡಲು ವಿಳಂಬ, ಜಮೀನು ಸರ್ವೇ ಕಾರ್ಯ, ನಿವೃತ್ತ ಸರ್ಕಾರಿ ನೌಕರರ ಪಿಂಚಣಿ, ಕ್ರಯ ಪತ್ರ, ನೀರಿನ ಸಮಸ್ಯೆ, ಗಡಿ ಗುರುತಿಸುವಿಕೆ ಮುಂತಾದ ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಉಚಿತ ಕಾನೂನು ಸಲಹೆಗಾಗಿ ಜಿಲ್ಲಾ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ದೂರು ನೀಡಲು ಬಂದಾಗ ಗೌರವದಿಂದ ನಡೆಸಿಕೊಳ್ಳುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆ ಮೇಲಿನ ನಂಬಿಕೆಯನ್ನು ಕಾಪಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಾರ್ವಜನಿಕ ಸಮಸ್ಯೆಗಳಿಗೆ ಯಾವುದೇ ನಿರೀಕ್ಷೆಗಳಿಲ್ಲದೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಕೆಲವು ಬಾರಿ ದೂರುದಾರರು ಹಾಗೂ ಎದುರುದಾರರು ಇಬ್ಬರಲ್ಲೂ ತಪ್ಪು ಕಂಡುಬರಬಹುದು. ಮುಂದೆ ತಪ್ಪುಗಳನ್ನು ಮಾಡದಂತೆ ಎಚ್ಚರವಹಿಸಬೇಕು ಎಂದು ಸರ್ಕಾರಿ ನೌಕರರಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ ಚನ್ನಕೇಶವ ರೆಡ್ಡಿ, ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

3 hours ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

10 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

10 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago