88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ- ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ

ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್ ಫಣೀಂದ್ರ ಅವರು ಹೇಳಿದರು.

ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ಸಾರ್ವಜನಿಕ ಅಹವಾಲು, ಕುಂದುಕೊರತೆ, ದೂರು ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ನಾಲ್ಕುದಿನದ ಪ್ರವಾಸದ ಮೊದಲ ದಿನದ ಶನಿವಾರದಂದು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ 81 ದೂರುಗಳು ಸಲ್ಲಿಕೆಯಾಗಿವೆ. ಅದರಲ್ಲಿ 03 ವಿವಿಧ ಪ್ರಕರಣಗಳು ಎಂದು ಗುರ್ತಿಸಲಾಗಿದೆ. 23 ಪ್ರಕರಣಗಳು ಕಾನೂನು ಸಲಹೆ, ಮೇಲ್ಮನವಿ, ಪೊಲೀಸ್ ತನಿಖೆ ಎಂದು ವಿಭಜಿಸಲಾಗಿ ಆಯಾ ವ್ಯಾಪ್ತಿಗೆ ಪ್ರಕರಣ ಹಸ್ತಾಂತರಿಸಲಾಗುವುದು ಎಂದರು.

ಸೋಮವಾರದಂದು ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಪೈಕಿ 74 ಪ್ರಕರಣ ವಿಚಾರಣೆ ನಡೆಸಿ 55 ಪ್ರಕರಣ ಇತ್ಯರ್ಥ ಪಡಿಸಲಾಯಿತು. ಮಂಗಳವಾರದಂದು 42 ಪ್ರಕರಣಗಳ ವಿಚಾರಣೆ ನಡೆಸಿ 33 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಒಟ್ಟು 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣ ಇತ್ಯರ್ಥ ಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿ, ಭೂ ಸ್ವಾಧೀನ ಹಾಗೂ ಪರಿಹಾರ ವಿತರಣೆ, ಪೌತಿ ಖಾತೆ, ಖಾತೆ ಬದಲಾವಣೆ, ಲಂಚಕ್ಕೆ ಬೇಡಿಕೆ, ಸರ್ಕಾರಿ ಆದೇಶಗಳನ್ನು ನೀಡಲು ವಿಳಂಬ, ಜಮೀನು ಸರ್ವೇ ಕಾರ್ಯ, ನಿವೃತ್ತ ಸರ್ಕಾರಿ ನೌಕರರ ಪಿಂಚಣಿ, ಕ್ರಯ ಪತ್ರ, ನೀರಿನ ಸಮಸ್ಯೆ, ಗಡಿ ಗುರುತಿಸುವಿಕೆ ಮುಂತಾದ ಪ್ರಕರಣಗಳು ಇತ್ಯರ್ಥ ಪಡಿಸಲಾಗಿದೆ.

ಸಾರ್ವಜನಿಕರು ನ್ಯಾಯಾಲಯಕ್ಕೆ ಸಂಬಂಧಿಸಿದಂತೆ ಉಚಿತ ಕಾನೂನು ಸಲಹೆಗಾಗಿ ಜಿಲ್ಲಾ ಕಾನೂನು ಪ್ರಾಧಿಕಾರವನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಹೇಳಿದರು.

ಪೊಲೀಸ್ ಠಾಣೆಗಳಿಗೆ ಸಾರ್ವಜನಿಕರು ದೂರು ನೀಡಲು ಬಂದಾಗ ಗೌರವದಿಂದ ನಡೆಸಿಕೊಳ್ಳುವುದರ ಜೊತೆಗೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಇಲಾಖೆ ಮೇಲಿನ ನಂಬಿಕೆಯನ್ನು ಕಾಪಾಡುವಂತೆ ಪೋಲಿಸ್ ಅಧಿಕಾರಿಗಳಿಗೆ ನಿರ್ದೇಶಿಸಿದರು.

ಸಾರ್ವಜನಿಕ ಸಮಸ್ಯೆಗಳಿಗೆ ಯಾವುದೇ ನಿರೀಕ್ಷೆಗಳಿಲ್ಲದೆ ಸರಿಯಾದ ರೀತಿಯಲ್ಲಿ ಸ್ಪಂದಿಸಬೇಕು. ಕೆಲವು ಬಾರಿ ದೂರುದಾರರು ಹಾಗೂ ಎದುರುದಾರರು ಇಬ್ಬರಲ್ಲೂ ತಪ್ಪು ಕಂಡುಬರಬಹುದು. ಮುಂದೆ ತಪ್ಪುಗಳನ್ನು ಮಾಡದಂತೆ ಎಚ್ಚರವಹಿಸಬೇಕು ಎಂದು ಸರ್ಕಾರಿ ನೌಕರರಿಗೆ ಸೂಚಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ,ಜಿಲ್ಲಾ ಮಟ್ಟದ ಅಧಿಕಾರಿಗಳು, ನೌಕರರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದರು.

ಕರ್ನಾಟಕ ಲೋಕಾಯುಕ್ತದ ಅಪರ ನಿಬಂಧಕರಾದ ಶಶಿಕಾಂತ್.ಬಿ.ಭಾವಿಕಟ್ಟಿ, ಉಪ ನಿಬಂಧಕರಾದ ಎಂ.ವಿ ಚನ್ನಕೇಶವ ರೆಡ್ಡಿ, ಸಿವಿಲ್ ನ್ಯಾಯಾಧೀಶರಾದ ಸಂದೀಪ್ ಸಾಲಿಯಾನ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕೆ.ಎನ್.ಅನುರಾಧ, ಅಪರ ಜಿಲ್ಲಾ ಪೊಲೀಸ್ ಅಧೀಕ್ಷಕ ಪುರುಷೋತ್ತಮ, ಅಪರ ಜಿಲ್ಲಾಧಿಕಾರಿ ಹೆಚ್.ಅಮರೇಶ್, ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಶ್ರೀನಾಥ್. ಎಂ.ಜೋಶಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ರಮೇಶ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು, ಲೋಕಾಯುಕ್ತ ಸಂಸ್ಥೆಯ ಸಿಬ್ಬಂದಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

4 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

6 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

9 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

23 hours ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago

0% ಭ್ರಷ್ಟಾಚಾರ: ಯಾರು ಕೂಡ ಸರ್ಕಾರಿ ಕಚೇರಿಗಳಲ್ಲಿ 10 ರೂಪಾಯಿ ಕೂಡಾ ಲಂಚ ನೀಡಬಾರದು- ಸಿಎಂ‌ ಡಿಕೆಶಿ

ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್‌ಪಿ, ಸಿಇಒ, ಡಿಎಫ್‌ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…

1 day ago