ಕೊಟ್ಟಿಗೆಯಲ್ಲಿದ್ದ 9 ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಮರಿ ಸೇರಿ 4 ಕುರಿಗಳು ಸಾವನ್ನಪ್ಪಿದ್ದು, 5 ಕುರಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.
ರೈತ ಲಕ್ಷ್ಮಿನಾರಾಯಣಪ್ಪ ಎಂಬುವವರ ಕುರಿಗಳ ಮೇಲೆ ನರಿಗಳು ದಾಳಿ ನಡೆಸಿ ಬಲಿ ಪಡೆದಿವೆ.
ಕುರಿಗಳ ಮೇಲೆ ಚಿರತೆ ದಾಳಿ ನಡೆಸಿದ್ದರಿಂದ ರೈತನಿಗೆ ಸುಮಾರು 50 ಸಾವಿರಕ್ಕೂ ಹೆಚ್ಚು ನಷ್ಟ ಉಂಟಾಗಿದ್ದು, ರೈತ ಲಕ್ಷ್ಮಿನಾರಾಯಣಪ್ಪ ಸಂಕಷ್ಟದಲ್ಲಿದ್ದಾನೆ.
ಈ ಭಾಗದಲ್ಲಿ ಹಲವು ಬಾರಿ ಚಿರತೆಯು ಜಾನುವಾರುಗಳ ಮೇಲೆ ದಾಳಿ ನಡೆಸುತ್ತಲೇ ಬಂದಿದ್ದು, ಅರಣ್ಯ ಇಲಾಖೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಅರಣ್ಯ ಇಲಾಖೆ ನಿರ್ಲಕ್ಷ್ಯತನಕ್ಕೆ ರೈತರು ಸಾಕಷ್ಟು ನಷ್ಟಕ್ಕೆ ಒಳಗಾಗುತ್ತಿದ್ದಾರೆ. ಇನ್ನಾದರೂ ಅರಣ್ಯ ಇಲಾಖೆ ಎಚ್ಚೆತ್ತುಕೊಂಡು ಕಾಡಿನಿಂದ ನಾಡಿಗೆ ಬಂದು ಸಾಕಷ್ಟು ಅವಾಂತರ ಸೃಷ್ಟಿಸುತ್ತಿರುವ ಕಾಡು ಪ್ರಾಣಿಗಳನ್ನು ಸೆರೆ ಹಿಡಿದು ಬೇರೆ ಕಡೆ ಬಿಡಬೇಕೆಂದು ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಯುವಕ ರವಿಕುಮಾರ್ ಆಗ್ರಹಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…