9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ ಪರದಾಟ.. ಹೀಗೆ ಸಾಲು ಸಾಲು ಸಮಸ್ಯೆಗಳಿಂದಲೇ ಬಸವಳಿದಿದ್ದ ರೈತರಿಗೆ ಬಮುಲ್ ಒಕ್ಕೂಟ ಬಂಪರ್ ಖುಷಿ ಸುದ್ದಿ ನೀಡಿದೆ.

ಮಾಜಿ ಸಂಸದ ಡಿ.ಕೆ. ಸುರೇಶ್ ಬಮುಲ್ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ 9 ತಿಂಗಳಲ್ಲಿ ಬರೊಬ್ಬರಿ 60 ಕೋಟಿ ರೂ. ಲಾಭಾಂಶವನ್ನು ಬೆಂಗಳೂರು ಹಾಲು ಒಕ್ಕೂಟ ಗಳಿಸಿದೆ. ಅಲ್ಲದೆ ಹಿಂದಿನ ಆಡಳಿತ ಮಂಡಳಿಗಳಲ್ಲಿ ದಾಖಲಾಗಿದ್ದ 14 ಕೋಟಿ ರೂ. ಸಾಲವನ್ನ ಮನ್ನ ಮಾಡಿ, ಬಮುಲ್ ಒಕ್ಕೂಟಕ್ಕೆ ಹಾಲು ಸರಬರಾಜು ಮಾಡುವ ಪ್ರತಿರೈತನಿಗೂ ಪ್ರತಿ ಲೀಟರ್ ಹಾಲಿಗೆ 1 ರೂ.ನೀಡಲು ಆಡಳಿತ ಮಂಡಳಿ ತೀರ್ಮಾನ ಮಾಡಿ ರೈತರಿಗೆ ಯುಗಾದಿ ಹಬ್ಬದ ಬೋನಸ್ ಘೋಷಿಸಿದೆ. ಈ ಮೂಲಕ ರೈತರ ಮೊಗದಲ್ಲಿ ನಗುವನ್ನು ಮೂಡಿಸಿದೆ.

ಪ್ರತಿ ಲೀ. ಹಾಲಿಗೆ ಒಂದು ರೂ. ಪ್ರೋತ್ಸಾಹ ಧನ ಹೆಚ್ಚಳ:

60 ಕೋಟಿ ರೂ. ಲಾಭ ಗಳಿಸಿರುವ ಬೆಂಗಳೂರು ಹಾಲು ಒಕ್ಕೂಟವು ಲಾಭದ ಸಂಪೂರ್ಣ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಡಿ.ಕೆ ಸುರೇಶ್ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಕಳೆದ 2025 ಏಪ್ರಿಲ್ 1 ರಿಂದ 2026ರ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಒಕ್ಕೂಟದ ವ್ಯಾಪ್ತಿಯ ರೈತರು ಡೇರಿಗಳಿಗೆ ಹಾಕಿರುವ ಪ್ರತಿ ಲೀಟರ್ ಹಾಲಿಗೆ ತಲಾ ಒಂದು ರೂಪಾಯಿಯಂತೆ ಪ್ರೋತ್ಸಾಹ ಧನ ವಿತರಿಸಲು ತೀರ್ಮಾನ ಮಾಡಿದೆ.

 14 ಕೋಟಿ ಸಾಲ ಚುಪ್ತಾ:

ಡಿ.ಕೆ ಸುರೇಶ್ ಬಮುಲ್ ಒಕ್ಕೂಟದ ಅಧ್ಯಕ್ಷರಾದ 9 ತಿಂಗಳ ಅವಧಿಯಲ್ಲಿ ಬೆಂಗಳೂರ ಹಾಲು ಒಕ್ಕೂಟದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಪಾರದರ್ಶಕತೆ ಆಡಳಿತದ ಫಲವಾಗಿ 60 ಕೋಟಿ ಲಾಭಂಶವನ್ನು ಬಮುಲ್ ಸಾಧಿಸಿದೆ. ಅಲ್ಲದೆ ಈ ಹಿಂದಿನಿಂದ ಬಮುಲ್ ಒಕ್ಕೂಟದ ಹೆಸರಿನಲ್ಲಿದ್ದ 14 ಕೋಟಿ ರೂ. ಸಾಲವನ್ನ ಕಟ್ಟಿ ಚುಪ್ತಾ ಮಾಡಲಾಗಿದೆ. ಮುಂದೆ ಹಾಲಿ ಬಮುಲ್ ಒಕ್ಕೂಟದಲ್ಲಿರುವ ವಿವಿಧ ಪದಾರ್ಥಗಳಿಂದ 131 ಕೋಟಿ ಮೌಲ್ಯದ ದಾಸ್ತಾನಿಂದ 60 ಕೋಟಿ ಲಾಭದ ನಿರೀಕ್ಷೆ ಹೊಂದಿದ್ದು, ಇದೀಗ ರೈತರ ಪ್ರಾತಿನಿಧಿಕ ಸಂಸ್ಥೆಯಾದ ಬಮುಲ್ ಲಾಭದತ್ತ ಮುಖಮಾಡಿರುವುದು ರೈತರಿಗೆ ಖುಷಿ ನೀಡಿದೆ.

ಪ್ರತಿ ಡೇರಿಗೆ 15 ಸಾವಿರ ಹಣ:

ಹಳ್ಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡೇರಿಗಳ ಕಾರ್ಯದರ್ಶಿಗಳು, ಹಾಲು ಪರೀಕ್ಷಕರು ಮತ್ತು ಅಲ್ಲಿನ ಸಿಬ್ಬಂದಿಗೂ ಆದ್ಯತೆ ನೀಡಿರುವ ಬಮುಲ್ ತಲಾ ಒಂದು ಡೇರಿಗೆ 15 ಸಾವಿರ ಸಹಾಯ ಧನ ಘೋಷಣೆ ಮಾಡಿದೆ. ಅಲ್ಲದೆ ಟಿಎಡಿಎ ಸೇರಿದಂತೆ ಬಾಕಿ ಇದ್ದಂತಹ ಎಲ್ಲಾ ಬಾಕಿ/ಖರ್ಚುಗಳನ್ನು ವಿತರಿಸಲು ಕ್ರಮ ಕೈಗೊಂಡಿದೆ. ಈ ಮೂಲಕ ಸಿಬ್ಬಂದಿ ನೆರವಿಗೂ ಧಾವಿಸಿದೆ.

ಪಶು ಆಹಾರದತ್ತ ಚಿತ್ತ:

ರೈತರ ಪ್ರಮುಖ ಬೇಡಿಕೆಯಾಗಿರುವ ಪಶು ಆಹಾರದ ಬೆಲೆ ಕಡಿವಾಣಕ್ಕೆ ಬೇಕಾದ ಕ್ರಮಗಳನ್ನು ಜರುಗಿಸಲು ಒಕ್ಕೂಟ ತೀರ್ಮಾನಿಸಿದ್ದು, ಮುಂದಿನ ದಿನಗಳಲ್ಲಿ ಪಶು ಆಹಾರ ಬೆಲೆಗಳು ರೈತರಿಗೆ ಕೈಗೆಡುಕುವ ರೀತಿಯಲ್ಲಿ ಜಾರಿ ಮಾಡಲು ಶ್ರಮಿಸಲಾಗುವುದು ಎಂದು ಬಮುಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಹಸುಗಳಿಗಾಗಿ ಸಾಲದ ಮೇಳ:

ಗ್ರಾಮೀಣ ಭಾಗದಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸುವ ಸಲುವಾಗಿ ರೈತರಿಗೆ ನೆರವಾಗಿ ಸಾಲ ನೀಡಲು ಮುಂದಾಗಿದೆ. ಜಿಲ್ಲಾ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಮೂಲಕ ಹೊಸ ಹಸು ಖರೀದಿಗೆ ವಿಶೇಷ ಸಾಲ ಯೋಜನೆ ನೀಡಲಾಗುವುದು. ಪ್ರತಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ 25 ಜನ ರೈತರಿಗೆ ವಾರ್ಷಿಕ ಶೇ. 3ರ ಬಡ್ಡಿ ದರದಲ್ಲಿ ರೂ. 1.60 ಲಕ್ಷದಿಂದ ರ. 15 ಲಕ್ಷ ವರೆಗೆ ಸಾಲ ನೀಡಲಾಗುವುದು. ಇದಕ್ಕಾಗಿ ಸಾಲದ ಮೇಳವನ್ನು ಆಯೋಜಿಸಲಾಗುವುದು . ಹೆಣ್ಣು ಕರು ಜನನವನ್ನು ಪ್ರೋತ್ಸಾಹಿಸಲು ತಳಿ ಸುಧಾರಣಾ ಕಾರ್ಯಕ್ರಮ ಇದೆ. ರೈತರಿಗೆ ಹಸಿ ಮೇವು, 1ಲಕ್ಷ ಮೇವು ಚೀಲಗಳು (ಕೌಮ್ಯಾಟ್) ಮತ್ತು ಹಾಲು ಕರೆಯುವ ಯಂತ್ರಗಳನ್ನು ರಿಯಾಯಿತಿ ದರದಲ್ಲಿ ಶೀಘ್ರವಾಗಿ ಒದಗಿಸಲಾಗುವುದು ಎಂದರು.

Ramesh Babu

Journalist

Recent Posts

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

44 minutes ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

4 days ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

5 days ago