9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ ಪರದಾಟ.. ಹೀಗೆ ಸಾಲು ಸಾಲು ಸಮಸ್ಯೆಗಳಿಂದಲೇ ಬಸವಳಿದಿದ್ದ ರೈತರಿಗೆ ಬಮುಲ್ ಒಕ್ಕೂಟ ಬಂಪರ್ ಖುಷಿ ಸುದ್ದಿ ನೀಡಿದೆ.

ಮಾಜಿ ಸಂಸದ ಡಿ.ಕೆ. ಸುರೇಶ್ ಬಮುಲ್ ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾದ 9 ತಿಂಗಳಲ್ಲಿ ಬರೊಬ್ಬರಿ 60 ಕೋಟಿ ರೂ. ಲಾಭಾಂಶವನ್ನು ಬೆಂಗಳೂರು ಹಾಲು ಒಕ್ಕೂಟ ಗಳಿಸಿದೆ. ಅಲ್ಲದೆ ಹಿಂದಿನ ಆಡಳಿತ ಮಂಡಳಿಗಳಲ್ಲಿ ದಾಖಲಾಗಿದ್ದ 14 ಕೋಟಿ ರೂ. ಸಾಲವನ್ನ ಮನ್ನ ಮಾಡಿ, ಬಮುಲ್ ಒಕ್ಕೂಟಕ್ಕೆ ಹಾಲು ಸರಬರಾಜು ಮಾಡುವ ಪ್ರತಿರೈತನಿಗೂ ಪ್ರತಿ ಲೀಟರ್ ಹಾಲಿಗೆ 1 ರೂ.ನೀಡಲು ಆಡಳಿತ ಮಂಡಳಿ ತೀರ್ಮಾನ ಮಾಡಿ ರೈತರಿಗೆ ಯುಗಾದಿ ಹಬ್ಬದ ಬೋನಸ್ ಘೋಷಿಸಿದೆ. ಈ ಮೂಲಕ ರೈತರ ಮೊಗದಲ್ಲಿ ನಗುವನ್ನು ಮೂಡಿಸಿದೆ.

ಪ್ರತಿ ಲೀ. ಹಾಲಿಗೆ ಒಂದು ರೂ. ಪ್ರೋತ್ಸಾಹ ಧನ ಹೆಚ್ಚಳ:

60 ಕೋಟಿ ರೂ. ಲಾಭ ಗಳಿಸಿರುವ ಬೆಂಗಳೂರು ಹಾಲು ಒಕ್ಕೂಟವು ಲಾಭದ ಸಂಪೂರ್ಣ ಹಣವನ್ನು ರೈತರಿಗೆ ನೀಡಲು ನಿರ್ಧರಿಸಿದೆ. ಈ ಬಗ್ಗೆ ಅಧ್ಯಕ್ಷ ಡಿ.ಕೆ ಸುರೇಶ್ ನೇತೃತ್ವದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಕಳೆದ 2025 ಏಪ್ರಿಲ್ 1 ರಿಂದ 2026ರ ಮಾರ್ಚ್ 31ಕ್ಕೆ ಅನ್ವಯವಾಗುವಂತೆ ಒಕ್ಕೂಟದ ವ್ಯಾಪ್ತಿಯ ರೈತರು ಡೇರಿಗಳಿಗೆ ಹಾಕಿರುವ ಪ್ರತಿ ಲೀಟರ್ ಹಾಲಿಗೆ ತಲಾ ಒಂದು ರೂಪಾಯಿಯಂತೆ ಪ್ರೋತ್ಸಾಹ ಧನ ವಿತರಿಸಲು ತೀರ್ಮಾನ ಮಾಡಿದೆ.

 14 ಕೋಟಿ ಸಾಲ ಚುಪ್ತಾ:

ಡಿ.ಕೆ ಸುರೇಶ್ ಬಮುಲ್ ಒಕ್ಕೂಟದ ಅಧ್ಯಕ್ಷರಾದ 9 ತಿಂಗಳ ಅವಧಿಯಲ್ಲಿ ಬೆಂಗಳೂರ ಹಾಲು ಒಕ್ಕೂಟದಲ್ಲಿ ಸಾಕಷ್ಟು ಬದಲಾವಣೆ ಮಾಡಲಾಗಿದೆ. ಪಾರದರ್ಶಕತೆ ಆಡಳಿತದ ಫಲವಾಗಿ 60 ಕೋಟಿ ಲಾಭಂಶವನ್ನು ಬಮುಲ್ ಸಾಧಿಸಿದೆ. ಅಲ್ಲದೆ ಈ ಹಿಂದಿನಿಂದ ಬಮುಲ್ ಒಕ್ಕೂಟದ ಹೆಸರಿನಲ್ಲಿದ್ದ 14 ಕೋಟಿ ರೂ. ಸಾಲವನ್ನ ಕಟ್ಟಿ ಚುಪ್ತಾ ಮಾಡಲಾಗಿದೆ. ಮುಂದೆ ಹಾಲಿ ಬಮುಲ್ ಒಕ್ಕೂಟದಲ್ಲಿರುವ ವಿವಿಧ ಪದಾರ್ಥಗಳಿಂದ 131 ಕೋಟಿ ಮೌಲ್ಯದ ದಾಸ್ತಾನಿಂದ 60 ಕೋಟಿ ಲಾಭದ ನಿರೀಕ್ಷೆ ಹೊಂದಿದ್ದು, ಇದೀಗ ರೈತರ ಪ್ರಾತಿನಿಧಿಕ ಸಂಸ್ಥೆಯಾದ ಬಮುಲ್ ಲಾಭದತ್ತ ಮುಖಮಾಡಿರುವುದು ರೈತರಿಗೆ ಖುಷಿ ನೀಡಿದೆ.

ಪ್ರತಿ ಡೇರಿಗೆ 15 ಸಾವಿರ ಹಣ:

ಹಳ್ಳಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡೇರಿಗಳ ಕಾರ್ಯದರ್ಶಿಗಳು, ಹಾಲು ಪರೀಕ್ಷಕರು ಮತ್ತು ಅಲ್ಲಿನ ಸಿಬ್ಬಂದಿಗೂ ಆದ್ಯತೆ ನೀಡಿರುವ ಬಮುಲ್ ತಲಾ ಒಂದು ಡೇರಿಗೆ 15 ಸಾವಿರ ಸಹಾಯ ಧನ ಘೋಷಣೆ ಮಾಡಿದೆ. ಅಲ್ಲದೆ ಟಿಎಡಿಎ ಸೇರಿದಂತೆ ಬಾಕಿ ಇದ್ದಂತಹ ಎಲ್ಲಾ ಬಾಕಿ/ಖರ್ಚುಗಳನ್ನು ವಿತರಿಸಲು ಕ್ರಮ ಕೈಗೊಂಡಿದೆ. ಈ ಮೂಲಕ ಸಿಬ್ಬಂದಿ ನೆರವಿಗೂ ಧಾವಿಸಿದೆ.

ಪಶು ಆಹಾರದತ್ತ ಚಿತ್ತ:

ರೈತರ ಪ್ರಮುಖ ಬೇಡಿಕೆಯಾಗಿರುವ ಪಶು ಆಹಾರದ ಬೆಲೆ ಕಡಿವಾಣಕ್ಕೆ ಬೇಕಾದ ಕ್ರಮಗಳನ್ನು ಜರುಗಿಸಲು ಒಕ್ಕೂಟ ತೀರ್ಮಾನಿಸಿದ್ದು, ಮುಂದಿನ ದಿನಗಳಲ್ಲಿ ಪಶು ಆಹಾರ ಬೆಲೆಗಳು ರೈತರಿಗೆ ಕೈಗೆಡುಕುವ ರೀತಿಯಲ್ಲಿ ಜಾರಿ ಮಾಡಲು ಶ್ರಮಿಸಲಾಗುವುದು ಎಂದು ಬಮುಲ್ ನಿರ್ದೇಶಕ ಬಿಸಿ ಆನಂದ್ ಕುಮಾರ್ ತಿಳಿಸಿದ್ದಾರೆ.

ಹಸುಗಳಿಗಾಗಿ ಸಾಲದ ಮೇಳ:

ಗ್ರಾಮೀಣ ಭಾಗದಲ್ಲಿ ಹಾಲಿನ ಉತ್ಪಾದನೆ ಹೆಚ್ಚಿಸುವ ಸಲುವಾಗಿ ರೈತರಿಗೆ ನೆರವಾಗಿ ಸಾಲ ನೀಡಲು ಮುಂದಾಗಿದೆ. ಜಿಲ್ಲಾ ಸಹಕಾರಿ ಬ್ಯಾಂಕ್ (ಬಿಡಿಸಿಸಿ) ಮೂಲಕ ಹೊಸ ಹಸು ಖರೀದಿಗೆ ವಿಶೇಷ ಸಾಲ ಯೋಜನೆ ನೀಡಲಾಗುವುದು. ಪ್ರತಿ ಸಹಕಾರ ಸಂಘದ ವ್ಯಾಪ್ತಿಯಲ್ಲಿ 25 ಜನ ರೈತರಿಗೆ ವಾರ್ಷಿಕ ಶೇ. 3ರ ಬಡ್ಡಿ ದರದಲ್ಲಿ ರೂ. 1.60 ಲಕ್ಷದಿಂದ ರ. 15 ಲಕ್ಷ ವರೆಗೆ ಸಾಲ ನೀಡಲಾಗುವುದು. ಇದಕ್ಕಾಗಿ ಸಾಲದ ಮೇಳವನ್ನು ಆಯೋಜಿಸಲಾಗುವುದು . ಹೆಣ್ಣು ಕರು ಜನನವನ್ನು ಪ್ರೋತ್ಸಾಹಿಸಲು ತಳಿ ಸುಧಾರಣಾ ಕಾರ್ಯಕ್ರಮ ಇದೆ. ರೈತರಿಗೆ ಹಸಿ ಮೇವು, 1ಲಕ್ಷ ಮೇವು ಚೀಲಗಳು (ಕೌಮ್ಯಾಟ್) ಮತ್ತು ಹಾಲು ಕರೆಯುವ ಯಂತ್ರಗಳನ್ನು ರಿಯಾಯಿತಿ ದರದಲ್ಲಿ ಶೀಘ್ರವಾಗಿ ಒದಗಿಸಲಾಗುವುದು ಎಂದರು.

Ramesh Babu

Journalist

Recent Posts

ಒಂದೇ ರಾತ್ರಿ ಎರಡು ಕಡೆ ಶ್ರೀಗಂಧದ ಮರಗಳ ಕಳವು

ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…

10 hours ago

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

12 hours ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

16 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

18 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

21 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago