ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್.ಅನುರಾಧಾ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿ.ಪಂ ಸಿಇಓ ಆಗಿ ಮೂರು ತಿಂಗಳ ಹಿಂದೆ ಜಿಲ್ಲೆಗೆ ಬಂದಿದ್ದ 2019ರ ಬ್ಯಾಚ್ ನ ವರ್ಣೀತ್ ನೇಗಿ ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂ.ಗ್ರಾ.ಜಿಲ್ಲೆಯ ನೂತನ ಸಿಇಓ ಆಗಿ ನೇಮಕಗೊಂಡಿರುವ ಡಾ.ಕೆ.ಎನ್.ಅನುರಾಧ ಅವರು ಈ ಹಿಂದೆ ತುಮಕೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ರೇಷ್ಮೆ ಇಲಾಖೆ ನಿರ್ದೇಶಕಿಯಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದರು.
ಆಯುಷ್ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಅವರನ್ನು ಸರ್ವೆ ಸೆಟಲ್ಮೆಂಟ್ ಹಾಗೂ ಭೂ ದಾಖಲೆಗಳ ಆಯುಕ್ತರಾಗಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕಿ ಸಿ.ಸತ್ಯಭಾಮಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ನೋಂಗ್ಜೈ ಮುಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತೆ ಸಿ.ಟಿ.ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ, ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಎಚ್.ವಿ.ದರ್ಶನ್ ಅವರನ್ನು ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…