ರಾಜ್ಯ ಸರಕಾರವು 9 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಡಾ.ಕೆ.ಎನ್.ಅನುರಾಧಾ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ.
ಬೆಂಗಳೂರು ಗ್ರಾಮಾಂತರ ಜಿ.ಪಂ ಸಿಇಓ ಆಗಿ ಮೂರು ತಿಂಗಳ ಹಿಂದೆ ಜಿಲ್ಲೆಗೆ ಬಂದಿದ್ದ 2019ರ ಬ್ಯಾಚ್ ನ ವರ್ಣೀತ್ ನೇಗಿ ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಬೆಂ.ಗ್ರಾ.ಜಿಲ್ಲೆಯ ನೂತನ ಸಿಇಓ ಆಗಿ ನೇಮಕಗೊಂಡಿರುವ ಡಾ.ಕೆ.ಎನ್.ಅನುರಾಧ ಅವರು ಈ ಹಿಂದೆ ತುಮಕೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ರೇಷ್ಮೆ ಇಲಾಖೆ ನಿರ್ದೇಶಕಿಯಾಗಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರ್ದೇಶಕಿಯಾಗಿಯೂ ಸೇವೆ ಸಲ್ಲಿಸಿದ್ದರು.
ಆಯುಷ್ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಅವರನ್ನು ಸರ್ವೆ ಸೆಟಲ್ಮೆಂಟ್ ಹಾಗೂ ಭೂ ದಾಖಲೆಗಳ ಆಯುಕ್ತರಾಗಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ನಿರ್ದೇಶಕಿ ಸಿ.ಸತ್ಯಭಾಮಾ ಅವರನ್ನು ಹಾಸನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಹಂಪಿ ವಿಶ್ವ ಪಾರಂಪರಿಕ ಪ್ರದೇಶ ನಿರ್ವಹಣಾ ಪ್ರಾಧಿಕಾರದ ಆಯುಕ್ತ ನೋಂಗ್ಜೈ ಮುಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ಹೊಸಪೇಟೆ ಉಪ ವಿಭಾಗದ ಸಹಾಯಕ ಆಯುಕ್ತರನ್ನಾಗಿ ವರ್ಗಾವಣೆ ಮಾಡಲಾಗಿದೆ.
ರಾಜ್ಯ ನಗರ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತೆ ಸಿ.ಟಿ.ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ, ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ್ ಅವರನ್ನು ವಿಜಯಪುರ ಜಿಲ್ಲಾಧಿಕಾರಿಯಾಗಿ, ತುಮಕೂರು ಮಹಾನಗರ ಪಾಲಿಕೆಯ ಆಯುಕ್ತ ಎಚ್.ವಿ.ದರ್ಶನ್ ಅವರನ್ನು ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…