ಬೆಂಗಳೂರು, ವೈಟ್ ಫಿಲ್ದ್ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.
ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್ ಫೀಲ್ದ್ ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.
ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು..
“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.
ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ – ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.
ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…
ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…
ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…
ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…
ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…