ಬೆಂಗಳೂರು, ವೈಟ್ ಫಿಲ್ದ್ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.
ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್ ಫೀಲ್ದ್ ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.
ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು..
“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.
ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ – ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…
ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…
ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…
ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…
ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…