ಬೆಂಗಳೂರು, ವೈಟ್ ಫಿಲ್ದ್ : ಮಾನವೀಯತೆ ಮತ್ತು ಅತ್ಯಾಧುನಿಕ ವೈದ್ಯಕೀಯ ತಂತ್ರಜ್ಞಾನದ ಸಹಾಯದಿಂದ 90 ವರ್ಷದ ವೃದ್ದನಿಗೆ ಮರು ಜೀವ ನೀಡಲಾಯಿತು . ವೃದ್ದನಿಗೆ ಜೀವಕ್ಕೆ ಅಪಾಯ ಉಂಟುಮಾಡುತ್ತಿದ್ದ ಗಂಭೀರ ಪಿತ್ತಕೋಶದ ಸೋಂಕನ್ನು ರೋಬೋಟಿಕ್ ಶಸ್ತ್ರಚಿಕಿತ್ಸೆಯ ಸಹಾಯದಿಂದ, ಶಸ್ತ್ರಚಿಕಿತ್ಸೆ ನಡೆಸಿ ಸಂಪೂರ್ಣವಾಗಿ ಗುಣಮುಖ ಮಾಡಲಾಯಿತು.
ಕಳೆದ ಒಂದು ತಿಂಗಳಿನಿಂದ ಹೊಟ್ಟೆನೋವು ಮತ್ತು ವಾಂತಿಯ ತೊಂದರೆಗಳಿಂದ ಬಳಲುತ್ತಿದ್ದ ವೃದ್ಧರನ್ನು ವೈಟ್ ಫೀಲ್ದ್ ನಲ್ಲಿರುವ ಮೆಡಿಕವರ್ ಆಸ್ಪತ್ರೆಯಲ್ಲಿ ದಾಖಲಿಸಲಾಯಿತು. ಎಲ್ಲಾ ರೀತಿಯ ತಪಾಸಣೆಗಳನ್ನು ಮಾಡಿದ ಬಳಿಕ ವೃದ್ದನಿಗೆ ಕಿಡ್ನಿ ಸ್ಟೋನ್ ನಿಂದಾಗಿ ಪಿತ್ತಕೋಶದ ರಂಧ್ರ ಮತ್ತು ಗ್ಯಾಂಗ್ರೀನ್ ಸೋಂಕು ಕಂಡುಬಂದಿತ್ತು . ತಕ್ಷಣ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಾಗುವ ಪರಿಸ್ಥಿತಿ ಇತ್ತು.
ಅಲ್ಲದೇ ವೃದ್ದನೂ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದು ಮಾತ್ರವಲ್ಲದೇ ವಯಸ್ಸಿನ ಆಧಾರದಲ್ಲಿ ಶಸ್ತ್ರಚಿಕಿತ್ಸೆ ಅಪಾಯಕರವಾಗಿದ್ದರೂ, ಕನ್ಸಲ್ಟೆಂಟ್ ರೋಬೋಟಿಕ್ ಮತ್ತು ಜನರಲ್ ಸರ್ಜನ್ ಡಾ. ಜಾವೇದ್ ಹುಸೇನ್ ಅವರ ನೇತೃತ್ವದಲ್ಲಿ ವೈದ್ಯಕೀಯ ತಂಡವು ಡಾ ವಿನ್ಸಿ ರೋಬೋಟಿಕ್ ಸರ್ಜಿಕಲ್ ಸಿಸ್ಟಮ್ ಬಳಸಿ ಶಸ್ತ್ರಚಿಕಿತ್ಸೆ ನಡೆಸಿದರು..
“90 ವರ್ಷದಲ್ಲಿ ಪ್ರತಿಯೊಂದು ಕ್ಷಣವೂ ಅಮೂಲ್ಯ. ಆದರೆ ರೋಬೋಟಿಕ್ ತಂತ್ರಜ್ಞಾನವು ನಮಗೆ ನಿಖರತೆ ಮತ್ತು ಸುರಕ್ಷತೆ ನೀಡಿತು,” ಎಂದು ಡಾ. ಜಾವೇದ್ ಹುಸೇನ್ ಹೇಳಿದರು.
ಈ ಘಟನೆ ಕೇವಲ ವೈದ್ಯಕೀಯ ಸಾಧನೆಯಲ್ಲ – ವಯಸ್ಸು ಅಡೆತಡೆ ಆಗದಂತೆ ಆಧುನಿಕ ರೋಬೋಟಿಕ್ ತಂತ್ರಜ್ಞಾನವು ಜೀವ ಉಳಿಸುವಲ್ಲಿ ಮಾಡಬಹುದಾದ ಅದ್ಭುತದ ಸಾಕ್ಷ್ಯವಾಗಿದೆ.
ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…
ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…
ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…
ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…
ದೇವನಹಳ್ಳಿ: ರಾಜ್ಯ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್ ಮುನಿಯಪ್ಪ ಅವರು…
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಆಘಾತ ಎದುರಾಗಿದೆ. ಸಚಿವ ರಾಮಲಿಂಗ ರೆಡ್ಡಿ ತಮ್ಮ…